ಬಿಜೆಪಿ ಯುವ ಮೋರ್ಚಾದಿಂದ ಪ್ರಧಾನಿ ಹುಟ್ಟುಹಬ್ಬದಂಗವಾಗಿ ರಕ್ತದಾನ ಶಿಬಿರ, ಅಂಗಾಂಗದಾನ ನೋಂದಣಿ

ಬಂಟ್ವಾಳ: ಬಿಜೆಪಿ ಯುವ ಮೋರ್ಚಾದಿಂದ ಪ್ರಧಾನಿ ಹುಟ್ಟುಹಬ್ಬದಂಗವಾಗಿ ರಕ್ತದಾನ ಶಿಬಿರ ಕೆಎಂಸಿ ಸಹಯೋಗದೊಂದಿಗೆ ಬಂಟ್ವಾಳದಲ್ಲಿ ನಡೆಯಿತು. ಈ ಸಂದರ್ಭ 172 ಯೂನಿಟ್ ರಕ್ತ, 124 ಅಯುಷ್ಮಾನ್  ಕಾರ್ಡ್ ನೋಂದಣಿ, 86 ಅಂಗಾಂಗ ದಾನ ನೋಂದಾವಣಿ ಮಾಡಲಾಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕೆ.ಎಂ.ಸಿ.ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ, ಅಂಗಾಗ ದಾನ ಮತ್ತು ನೇತ್ರದಾನ ಶಿಬಿರವನ್ನು ಯುವ ಮೋರ್ಚಾ ಏರ್ಪಡಿಸಿರುವುದು ಶ್ಲಾಘನೀಯ, ದೇಶದ ಭವಿಷ್ಯದ ನಿರ್ಮಾಣದಲ್ಲಿ ಮಹತ್ತರ ಸೇವೆ ನೀಡಿತ್ತಿರುವ ಮಹಾನ್ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಯುವ ಮೋರ್ಚಾ ಪ್ರಭಾರಿ ಪುರುಷೋತ್ತಮ ಶೆಟ್ಟಿ ವಾಮದಪದವು, ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಡಾ.ಐಶ್ವರ್ಯ ತೇಜ ಉಪಸ್ಥಿತರಿದ್ದರು. ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟ್ರಾನ್ಸ್ ಪ್ಲಾಟ್ ಸಂಯೋಜಕಿ ಪದ್ಮಾ ವೇಣೂರು ಅವರು ಅಂಗಾಂಗ ದಾನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುದೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಉಪಾದ್ಯಕ್ಷರಾದ ಸಂತೋಷ್ ಬೊಳಿಯಾರ್,ಜಿಲ್ಲಾ ಕಾರ್ಯದರ್ಶಿ ಯಾದ ಭರತ್ ಶೆಟ್ಟಿ, ಬಂಟ್ವಾಳ ಮಂಡಲದ ಪ್ರದಾನ ಕಾರ್ಯದರ್ಶಿಯಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಮಾಧವ ಮಾವೆ, ಪುಷ್ಪರಾಜ ಚೌಟ, ಮೋಹನ ಪಿ.ಎಸ್, ಯಶೋಧರ ಕರ್ಬೆಟ್ಟು, ಗಣೇಶ್ ರೈ ಮಾಣಿ,  ಹಿಂದೂ ಜಾಗರಣ ವೇದಿಕೆಯ ಪ್ರಶಾಂತ್ ಕೆಂಪುಗುಡ್ಡೆ, ಚಂದ್ರ ಕಲಾಯಿ, ಬಾಲಕೃಷ್ಣ, ತಿರುಲೇಶ್ ಬೆಳ್ಳೂರು, ಜಗದೀಶ್ ನೆತ್ರಕೆರೆ, ಗಣೇಶ್ ಕೆದಿಲ, ರತ್ನಾಕರ್ ಶೆಟ್ಟಿ ಕಲ್ಲಡ್ಕ ಮತ್ತು ಬಜರಂಗದಳ ದ ಪ್ರಮುಖರಾದ ಭುವಿತ್ ಶೆಟ್ಟಿ, ಅಭಿನ್ ರೈ, ಅಕೇಶ್ ಬೆಂಜನಪದವು ಸಹಿತ ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಬಾಳಿಕೆ ಸ್ವಾಗತಿಸಿದರು. ಉಪಾಧ್ಯಕ್ಷ ಸುರೇಶ್ ಕೋಟ್ಯಾನ್ ವಂದಿಸಿದರು. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿ ಯುವ ಮೋರ್ಚಾದಿಂದ ಪ್ರಧಾನಿ ಹುಟ್ಟುಹಬ್ಬದಂಗವಾಗಿ ರಕ್ತದಾನ ಶಿಬಿರ, ಅಂಗಾಂಗದಾನ ನೋಂದಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*