ಬಂಟ್ವಾಳ

ಬಂಟ್ವಾಳದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆಯನ್ನು ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ಜಗತ್ತನ್ನು ವಿನ್ಯಾಸಗೊಳಿಸಿದ ವಿಶ್ವಕರ್ಮ ಜಯಂತಿ ಆಚರಣೆಯನ್ನು ಎಲ್ಲರೂ ಒಟ್ಟಾಗಿ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರಿ ಕಾರ್ಯಕ್ರಮಗಳನ್ನೂ ಮಾಡಲಾಗುತ್ತಿದೆ. ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆಯೂ ನಡೆದಿದ್ದು, ನವಭಾರತದ ನಿರ್ಮಾಣದಲ್ಲಿ ಅವರು ತೊಡಗಿಸಿಕೊಂಡಿರುವುದು ಸಂತಸ ತಂದಿದೆ ಎಂದರು.

ಬಂಟ್ವಾಳ ಕಾಲೇಜಿನ ಪ್ರಾಧ್ಯಾಪಕ ಮುರಳೀಧರ ಅವರು ವಿಶ್ವಕರ್ಮ ಪೂಜೆಯ ಕುರಿತು ಉಪನ್ಯಾಸ ನೀಡಿದರು. ಬಂಟ್ವಾಳ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಸುಧಾಕರ ಆಚಾರ್ಯ, ಕಾರ್ಯದರ್ಶಿ ಸಂದೀಪ್ ಬಿ., ಮಹಿಳಾ ಘಟಕಾಧ್ಯಕ್ಷೆ ಪ್ರತಿಮಾ ಆಚಾರ್ಯ, ಪ್ರಮುಖರಾದ ಸುನಿಲ್, ಉಮೇಶ್ ಆಚಾರ್ಯ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಉಪತಹಸೀಲ್ದಾರ್ ವಿಜಯ ವಿಕ್ರಮ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ವಿಷಯ ನಿರ್ವಾಹಕ ವಿಷುಕುಮಾರ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ