ಕಲ್ಲಡ್ಕ

ಮಿತ್ತಮಜಲಿನ ಕುಟುಂಬಗಳ ಸದಸ್ಯರಿಗೆ ನೆರವು

ಬಂಟ್ವಾಳ: ಸಜಿಪಮೂಡ ಗ್ರಾಮದ ಮಿತ್ತಮಜಲು ಅಂಗನವಾಡಿ ಕೇಂದ್ರದ ಪಕ್ಕ ಎರಡು ಕುಟುಂಬಗಳ ಇಬ್ಬರು ಸದಸ್ಯರು ಅನಾರೋಗ್ಯಪೀಡಿತರಾಗಿದ್ದು, ಅವರ ಶೋಚನೀಯ ಪರಿಸ್ಥಿತಿ ಕಂಡು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಮತ್ತು ಸಾಮಾಜಿಕ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದರು. ಎರಡು ತಿಂಗಳಿಂದ ಕುಟುಂಬದ ಮೂವರ ಪೈಕಿ ಇಬ್ಬರಿಗೆ ಅನಾರೋಗ್ಯ ಉಂಟಾಗಿದ್ದು, ಪರಿಸ್ಥಿತಿ ಹದಗೆಟ್ಟಿತ್ತು. ಇದನ್ನು ತಿಳಿದು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ಹಾಗೂ ಉಪಾಧ್ಯಕ್ಷರಾದ ಎಸ್ ಸಿದ್ದಿಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಾ, ಅರೋಗ್ಯ ಸಹಾಯಕಿ ರೋಹಿಣಿ, 1 ನೇ ವಾರ್ಡ್ ಆಶಾ ಕಾರ್ಯಕರ್ತೆ ಗೀತಾ ರೋಗಿಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಮನೆ ದುರಸ್ತಿ ಮಾಡಿಕೊಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ. ಈ ಸಂದರ್ಭ ಸಮಾಜಸೇವಕರಾದ ಸಿದ್ದಿಕ್ ನಡಿಗುತ್ತು, ಮಾಲಿಕ್ ಪಿ ಜೆ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ