ವಿಟ್ಲ

ಮಾಣಿಲದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಭಕ್ತಿ ಶ್ರದ್ದೆಯಿಂದ ಮಾಡಿದ ಕಾರ್ಯದಲ್ಲಿ ಫಲ ಹೆಚ್ಚು. ಇತರರ ಮನಸ್ಸಿಗೆ ನೋವುಂಟು ಮಾಡದೆ ಎಲ್ಲರನ್ನೂ ಪ್ರೀತಿಸುವ ಮನಸ್ಸು ನಮ್ಮದಾಗಬೇಕು.ನವರಾತ್ರಿ ಸಂದರ್ಭನವದುರ್ಗೆಯರ ಆರಾಧನೆಯಿಂದ ನಿಮ್ಮೆಲ್ಲರ ಕಷ್ಟಗಳೆಲ್ಲೂ ದೂರವಾಗಲಿ. ನವದುರ್ಗೆಯರು ಎಲ್ಲರಿಗೂ ಒಳಿತು ಮಾಡಲಿ ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಕ್ಷೇತ್ರದಲ್ಲಿ ಸೆ.26ರಿಂದ ಅ.6ರ ವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವಕ್ಕೆ  ಚಾಲನೆ ನೀಡಿ, ಕೊಪ್ಪರಿಗೆ ಮುಹೂರ್ತ ನಡೆಸಿ  ಆಶೀರ್ವಚನ ನೀಡಿದರು.

ಸೆ.26ರಂದು ಬೆಳಗ್ಗೆ ಗಣಪತಿಹೋಮ ನಡೆದು ಕೊಪ್ಪರಿಗೆ ಮುಹೂರ್ತ ನಡೆಯಿತು. ದೇವತಾ ಕಾರ್ಯಕ್ರಮಗಳು ಬಳಿಕ ಚಂಡಿಕಾಯಾಗ, ಭಜನಾ ಸಂಕೀರ್ತನೆ, ಸಾಮೂಹಿಕ ಕುಂಕುಮಾರ್ಚನೆ ನಡೆದು ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಟ್ರಸ್ಟಿ ತಾರನಾಥ ಕೊಟ್ಟಾರಿ, ಮಂಜು ವಿಟ್ಲ, ರಮೇಶ್ ಪನೊಳಿಬೈಲು, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.