ವಿಟ್ಲ

ಮಾಣಿಲದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಭಕ್ತಿ ಶ್ರದ್ದೆಯಿಂದ ಮಾಡಿದ ಕಾರ್ಯದಲ್ಲಿ ಫಲ ಹೆಚ್ಚು. ಇತರರ ಮನಸ್ಸಿಗೆ ನೋವುಂಟು ಮಾಡದೆ ಎಲ್ಲರನ್ನೂ ಪ್ರೀತಿಸುವ ಮನಸ್ಸು ನಮ್ಮದಾಗಬೇಕು.ನವರಾತ್ರಿ ಸಂದರ್ಭನವದುರ್ಗೆಯರ ಆರಾಧನೆಯಿಂದ ನಿಮ್ಮೆಲ್ಲರ ಕಷ್ಟಗಳೆಲ್ಲೂ ದೂರವಾಗಲಿ. ನವದುರ್ಗೆಯರು ಎಲ್ಲರಿಗೂ ಒಳಿತು ಮಾಡಲಿ ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಕ್ಷೇತ್ರದಲ್ಲಿ ಸೆ.26ರಿಂದ ಅ.6ರ ವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವಕ್ಕೆ  ಚಾಲನೆ ನೀಡಿ, ಕೊಪ್ಪರಿಗೆ ಮುಹೂರ್ತ ನಡೆಸಿ  ಆಶೀರ್ವಚನ ನೀಡಿದರು.

ಸೆ.26ರಂದು ಬೆಳಗ್ಗೆ ಗಣಪತಿಹೋಮ ನಡೆದು ಕೊಪ್ಪರಿಗೆ ಮುಹೂರ್ತ ನಡೆಯಿತು. ದೇವತಾ ಕಾರ್ಯಕ್ರಮಗಳು ಬಳಿಕ ಚಂಡಿಕಾಯಾಗ, ಭಜನಾ ಸಂಕೀರ್ತನೆ, ಸಾಮೂಹಿಕ ಕುಂಕುಮಾರ್ಚನೆ ನಡೆದು ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಟ್ರಸ್ಟಿ ತಾರನಾಥ ಕೊಟ್ಟಾರಿ, ಮಂಜು ವಿಟ್ಲ, ರಮೇಶ್ ಪನೊಳಿಬೈಲು, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.