ಸಾಹಿತ್ಯ ತಾರೆ, ಬಾಲಬಂಧು ಪ್ರಶಸ್ತಿಗೆ ಆಹ್ವಾನ

This image has an empty alt attribute; its file name is SAMBHRAMA-ELECTRONICS-723x1024.jpeg
This image has an empty alt attribute; its file name is WhatsApp-Image-2022-08-25-at-7.55.14-AM-1-1024x1024.jpeg

ಮಕ್ಕಳ ಕಲಾ ಲೋಕ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವು ಓಜಾಲದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಸಹಭಾಗಿತ್ವದಲ್ಲಿ ಡಿ.13ರಂದು ನಡೆಯಲಿದೆ ಸಮ್ಮೇಳನದ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ ಪೆಲತ್ತಿಂಜ ಈ ವಿಷಯ ತಿಳಿಸಿದ್ದು, ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸಬಹುದೆಂದರು.

ತಾಲೂಕಿನೊಳಗಿರುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳಲ್ಲಿ ಐದು ವರ್ಷಗಳಿಂದೀಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ವಿದ್ಯಾ ಸಂಸ್ಥೆಗೆ, ಸಮ್ಮೇಳನದಂದು ಸಾಹಿತ್ಯ ತಾರೆ ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗೆ ಸಹಕರಿಸಿದ ಸಾಧಕರ ವಿವರಗಳನ್ನು ಬರೆದು ಕಳುಹಿಸಲು ಆಹ್ವಾನಿಸಿರುವ ಅವರು, ಆಯ್ದ ಸಾಧಕರಿಗೆ, ಬಾಲಬಂಧು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದರು. ವಿವರಗಳನ್ನು ೨೦೨೨ ಅಕ್ಟೋಬರ್ ಒಳಗಾಗಿ ಕೆಳಗಿನ ವಿಳಾಸಕ್ಕೆ ತಲುಪಿಸ ಬೇಕು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಳಾಸ ಹೀಗಿದೆ. ಅಧ್ಯಕ್ಷರು, ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು, ಈಸ್ಲೆರಿ, ಕರವೀರ- ಅಂಚೆ ನೀರ್ಕಜೆ, ಪಿನ್: ೫೭೪೨೪೩ ಮೊಬೈಲ್ ೯೪೪೮೬೨೬೦೯೩

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಹಿತ್ಯ ತಾರೆ, ಬಾಲಬಂಧು ಪ್ರಶಸ್ತಿಗೆ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*