Uncategorized

ಸಾಹಿತ್ಯ ತಾರೆ, ಬಾಲಬಂಧು ಪ್ರಶಸ್ತಿಗೆ ಆಹ್ವಾನ

ಮಕ್ಕಳ ಕಲಾ ಲೋಕ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವು ಓಜಾಲದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಸಹಭಾಗಿತ್ವದಲ್ಲಿ ಡಿ.13ರಂದು ನಡೆಯಲಿದೆ ಸಮ್ಮೇಳನದ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ ಪೆಲತ್ತಿಂಜ ಈ ವಿಷಯ ತಿಳಿಸಿದ್ದು, ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸಬಹುದೆಂದರು.

ತಾಲೂಕಿನೊಳಗಿರುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳಲ್ಲಿ ಐದು ವರ್ಷಗಳಿಂದೀಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ವಿದ್ಯಾ ಸಂಸ್ಥೆಗೆ, ಸಮ್ಮೇಳನದಂದು ಸಾಹಿತ್ಯ ತಾರೆ ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗೆ ಸಹಕರಿಸಿದ ಸಾಧಕರ ವಿವರಗಳನ್ನು ಬರೆದು ಕಳುಹಿಸಲು ಆಹ್ವಾನಿಸಿರುವ ಅವರು, ಆಯ್ದ ಸಾಧಕರಿಗೆ, ಬಾಲಬಂಧು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದರು. ವಿವರಗಳನ್ನು ೨೦೨೨ ಅಕ್ಟೋಬರ್ ಒಳಗಾಗಿ ಕೆಳಗಿನ ವಿಳಾಸಕ್ಕೆ ತಲುಪಿಸ ಬೇಕು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಳಾಸ ಹೀಗಿದೆ. ಅಧ್ಯಕ್ಷರು, ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು, ಈಸ್ಲೆರಿ, ಕರವೀರ- ಅಂಚೆ ನೀರ್ಕಜೆ, ಪಿನ್: ೫೭೪೨೪೩ ಮೊಬೈಲ್ ೯೪೪೮೬೨೬೦೯೩

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.