ಬಂಟ್ವಾಳ

ನಂತೂರು ನಿಟ್ಟೆ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರ ಶಂಭೂರಿನಲ್ಲಿ ಆರಂಭ

ಬಂಟ್ವಾಳ: ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಎನ್. ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ಆರಂಭಗೊಂಡಿತು.

ಈ ಸಂದರ್ಭ ಹೈಸ್ಕೂಲಿನ ಕಾರ್ಯಾಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಯ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಗೆ ಎನ್ಎಸ್ಎಸ್ ದಾರಿದೀಪವಾಗಬಲ್ಲ ಜೀವನ ಪಾಠಗಳನ್ನು ತಿಳಿಸಿಕೊಡುತ್ತದೆ ಎಂದರು.

ಇದೇ ಸಂದರ್ಭ ಅಕ್ಕಿಯ ಕಲಶದಲ್ಲಿ ಹಿಂಗಾರ ಅರಳಿಸುವುದರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಪರಂಗಿಪೇಟೆಯ ಸೇವಾಂಜಲಿ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ ಪೂ0ಜ ಪಟ್ಟಣದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ಮೂಲಕ ಹಳ್ಳಿ ಪರಿಸರದ ಜೀವನ ಕ್ರಮ ತಿಳಿದುಕೊಳ್ಳಲು ಒಂದು ಉತ್ತಮ ಅವಕಾಶ ಎಂದರು.

ಜಾಹೀರಾತು

ಶ್ರಮದಾನದ ಉದ್ಘಾಟನೆಯನ್ನು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆರವೇರಿಸಿದರು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಿನ್ಸಿಪಾಲ್ ಡಾ. ನವೀನ್ ಶೆಟ್ಟಿ ಕೆ., ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಯಲು, ನಾಯಕತ್ವದ ಗುಣ ಬೆಳೆಸಿಕೊಳ್ಳಲು ಎನ್ಎಸ್ಎಸ್ ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದರು.

ಪ್ರೌಢಶಾಲೆ ಮುಖ್ಯೋಪಾಧ್ಯಾಯ ಕಮಲಾಕ್ಷ, ಉದ್ಯಮಿ ಪದ್ಮನಾಭ ಮಯ್ಯ, ಶೇಡಿ ಗುರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಂಚಾಲಕ ಯಶೋಧರ ಬಂಗೇರ, ಶೇಡಿಗುರಿ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಸೀತಾ ಆನಂದ ಪೂಜಾರಿ, ಬಂಟ್ವಾಳ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ, ಶಂಬೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುಧೀರ್ ನಿರ್ಮಲ್, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಅನ್ನಪೂರ್ಣ ನಾಯಕ್, ಕಮಲಾಕ್ಷ, ಎನ್.ಎಸ್.ಎಸ್ ವಿದ್ಯಾರ್ಥಿ ನಾಯಕ ಸುದೀಪ್ ರೈ, ವಿದ್ಯಾರ್ಥಿ ನಾಯಕಿ ಸಾಕ್ಷಿ ಶೆಟ್ಟಿ, ಸಹಯೋಜನಾಧಿಕಾರಿಗಳಾದ ಮೀರಾ ಕ್ರಾಸ್ತ, ಕಾರ್ತಿಕ್ ನಾಯಕ್, ವಿದ್ಯಾಧರ್ ಠಾಕುರ್, ಮಂಜುಲೇಷ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು. ಎನ್ಎಸ್ಎಸ್ ಯೋಜನಾಧಿಕಾರಿ ಸಂಧ್ಯಾ ಸ್ವಾಗತಿಸಿದರು, ಗೀತಾ ವಂದಿಸಿದರು. ಟಿ.ವಿ. ಗಿರಿ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ