ಬಂಟ್ವಾಳ: ಬಂಟ್ವಾಳದ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ ಕಾರ್ಯ ಭಾನುವಾರ ನಡೆಯಿತು. ಈ ಸಂದರ್ಭ ಆಗಮಿಸಿದ ಭಕ್ತರು ಪ್ರಾಂಗಣದ ನೆಲಹಾಲುಗಳನ್ನು ತೆಗೆಯುವ ಕೆಲಸ ಮಾಡಿದರು. ಶ್ರೀರಾಮ ಗೆಳೆಯರ ಬಳಗ ಸಹಿತ ವಿವಿಧ ಸಂಘಟನೆಗಳೂ ಸಾಥ್ ನೀಡಿದವು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಜತೆಗೂಡಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…