ಬಂಟ್ವಾಳ

ಪಾಣೆಮಂಗಳೂರಿನಲ್ಲಿ ದ.ಕ.ಜಿಲ್ಲೆಯ ಮೊದಲ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಆರಂಭ

ಬಂಟ್ವಾಳ: ಕೇಂದ್ರ ಸರಕಾರ ಒಂದು ದೇಶ ಒಂದು ರಸಗೊಬ್ಬರ ಯೋಜನೆಯ ಭಾಗವಾಗಿ ಪ್ರಧಾ‌ನಿ ನರೇಂದ್ರ ಮೋದಿ ಸೋಮವಾರ ದೇಶದಾದ್ಯಂತ 600 ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಲೋಕಾರ್ಪಣೆಗೊಳಿಸಿದ್ದು, ಅದರ ಭಾಗವಾಗಿ ದ.ಕ.ಜಿಲ್ಲೆಯ ಮೊದಲ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಆರಂಭಗೊಂಡಿದೆ.

ಪಾಣೆಮಂಗಳೂರು ಮೆ. ಇಂದ್ರ ಅಗ್ರಿ ಸಪ್ಲಾಯರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ತೆರೆಯಲಾದ ಕೇಂದ್ರವನ್ನು ಮಂಗಳೂರು ಉಪವಿಭಾಗ ಕೃಷಿ ನಿರ್ದೇಶಕಿ ಭಾರತಮ್ಮ ಉದ್ಘಾಟಿಸಿದರು.

ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಂದನ್ ಶೆಣೈ, ಆರ್.ಸಿ.ಎಫ್. ರಸಗೊಬ್ಬರ ಕಂಪನಿಯ ಹಿರಿಯ ಮಾರ್ಕೆಟಿಂಗ್ ಅಧಿಕಾರಿ ವಿ.ಶಿವಕುಮಾರ್, ಅಗ್ರಿ ಸಪ್ಲಾಯರ್ಸ್ ನ ಭುವನೇಂದ್ರ ಇಂದ್ರ, ಪ್ರಗತಿಪರ ಕೃಷಿಕ ಗಣಪತಿ ಭಟ್ ಇದ್ದರು. ಈ ಕೇಂದ್ರ ಮೊದಲ ಬಾರಿಗೆ ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ ಆರ್.ಸಿ.ಎಫ್. ಸಂಸ್ಥೆಯಿಂದ ತೆರೆಯಲಾಗಿದ್ದು, ಕೇಂದ್ರದಲ್ಲಿ ರಸಗೊಬ್ಬರ ಕೀಟನಾಶಕ ವಿತರಣೆ, ರೈತರಿಗೆ ಕೃಷಿ ತಾಂತ್ರಿಕ ಮಾಹಿತಿ ಸಹಿತ ಕೃಷಿ ಸಂಬಂಧಿಸಿದಂತೆ ವಿಚಾರಗಳನ್ನು ಒಂದೇ ಸೂರಿನಲ್ಲಿ ಪಡೆಯಬಹುದು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ