ನಿರತ ಸಾಹಿತ್ಯ ಸಂಪದ ಬೆಳ್ಳಿಹೆಜ್ಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದ್ದು, ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ನಡೆಯಿತು.

ಹಿರಿಯ ಪತ್ರಕರ್ತ ಹರೀಶ ಮಾಂಬಾಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕಳೆದ 25 ವರ್ಷಗಳಿಂದ ಸಾಮಾನ್ಯ ಬರೆಹಗಾರರು, ಉದಯೋನ್ಮುಖ ಕವಿಗಳಿಗೆ ವೇದಿಕೆ ದೊರಕಿಸಿಕೊಟ್ಟ ನಿರತ ಸಾಹಿತ್ಯ ಸಂಪದದಲ್ಲಿ ಪ್ರಥಮ ಕವನವಾಚನ ಮಾಡಿದವರಿಂದು ನಾಡಿನ ಶ್ರೇಷ್ಠ ಕವಿಗಳಾಗಿ ಮೆರೆದಿದ್ದು, ಇದು ನಿರತದ ಹೆಗ್ಗಳಿಕೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನಿರತ ಗೌರವಾಧ್ಯಕ್ಷ ವಿ.ಸು.ಭಟ್, ಉತ್ಸಾಹಿ ಯುವಕರು ಆರಂಭಿಸಿದ ಸಾಹಿತ್ಯ ಸಂಪದ ಇಂದು ಬೆಳ್ಳಿಹೆಜ್ಜೆಯನ್ನಿಡುತ್ತಿರುವುದು ಸಂತಸದ ವಿಚಾರ ಎಂದರು. ಹಿರಿಯ ಕವಯತ್ರಿ ಗೀತಾ ಎಸ್.ಕೋಂಕೋಡಿ ಮುಖ್ಯ ಅತಿಥಿಗಳಾಗಿದ್ದರು.

ಜಾಹೀರಾತು

ಈ ಸಂದರ್ಭ ನಿರತ ಬೆಳೆದುಬಂದ ದಾರಿಯನ್ನು ಅಬ್ದುಲ್ ಮಜೀದ್ ಎಸ್ ವಿವರಿಸಿದರು. ನಿರತ ಅಧ್ಯಕ್ಷ ಬೃಜೇಶ್ ಅಂಚನ್ ವಂದಿಸಿದರು. ಸಮಾರಂಭದಲ್ಲಿ ಜಯರಾಮ ಪಡ್ರೆ, ದಿನೇಶ್ ಎಂ.ತುಂಬೆ, ವಿನೋದ್ ಪುದು, ಸಾಹುಲ್ ಹಮೀದ್ ಉಪಸ್ಥಿತರಿದ್ದರು.

ನ.6ರಂದು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಮಧ್ಯಾಹ್ನ 2ರಿಂದ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ತುಕಾರಾಮ ಪೂಜಾರಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭ ನಿರತ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನೀಡಲಾಗುವುದು. ನಿರತ ಅನಿಯತಕಾಲಿಕ ಕೈಬರೆಹ ಪತ್ರಿಕೆ ಅನಾವರಣ, ಸಾಹಿತ್ಯದಿಂಚರ ಎಂಬ ಇಪ್ಪತ್ತೈದು ಕವಿಗಳ ಸಮ್ಮಿಲನ ಇರಲಿದ್ದು, ಸಂಜೆ 6ರಿಂದ ಭಾವತರಂಗ, ಯಕ್ಷ ಸಂವಾದ ನಡೆಯಲಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಿರತ ಸಾಹಿತ್ಯ ಸಂಪದ ಬೆಳ್ಳಿಹೆಜ್ಜೆ ಆಮಂತ್ರಣ ಪತ್ರಿಕೆ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*