ಭಾನುವಾರ ಬ್ರಾಹ್ಮೀಮುಹೂರ್ತದಲ್ಲಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ 21ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ನಡೆಸಲಾಯಿತು. ಬೆಳಗ್ಗೆ ಹಣತೆ ಮೂಲಕ ದೀಪ ಬೆಳಗಿಸಿ ವಿವಿಧ ರೂಪಗಳಲ್ಲಿ ದೇವಸ್ಥಾನವನ್ನು ಅಲಂಕರಿಸಲಾಯಿತು. ಕಾಕಡಾರತಿ, ಜಾಗರ ಪೂಜೆ, ವಿಶೇಶಾಲಂಕಾರ ಬಳಿಕ ವಿಶ್ವರೂಪದರ್ಶನ, ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಭಜನಾಮೃತಕ್ಕೆ ಮಂಗಳೂರಿನ ಎಚ್.ನಾಗಕಿರಣ್ ನಾಯಕ್ ಚಾಲನೆ ನೀಡಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ವರ್ಗ, ಭಕ್ತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ"