ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: ಬಂಟ್ವಾಳದಲ್ಲಿ ಸಮಿತಿ ರಚನೆ, ಸಿದ್ಧತಾ ಸಭೆ

ಬಂಟ್ವಾಳ: ಮೂಡುಬಿದಿರೆಯಲ್ಲಿ ಡಿ.21ರಿಂದ 27ರವರೆಗೆ ನಡೆಯಲಿರುವ ಭಾರತ ಸ್ಕೌಟ್ ಗೈಡ್ಸ್ ಅಂತಾರಾಷ್ಟ್ರೀಯ ಜಾಂಬೂರಿ ಸಿದ್ಧತಾ ಸಭೆ ಹಾಗೂ ಬಂಟ್ವಾಳ ತಾಲೂಕು ಸಮಿತಿ ರಚನೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ದ.ಕ.ಜಿಲ್ಲಾ ಪ್ರಧಾನ ಆಯುಕ್ತ ಡಾ. ಎಂ.ಮೋಹನ ಆಳ್ವ ಈ ಸಂದರ್ಭ ಮಾತನಾಡಿ, ಸುಮಾರು 50 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿರುವ ಸಮಾರಂಭದಲ್ಲಿ ದಿನನಿತ್ಯ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, 35 ಕೋಟಿ ರೂ ವೆಚ್ಚ ತಗಲಲಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಮೊತ್ತದ ದೇಣಿಗೆಯನ್ನು ಸಾರ್ವಜನಿಕರು ನೀಡಿ ಸಹಕರಿಸಬೇಕು ಎಂದು ವಿನಂತಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭಾಗವಹಿಸಿ, ಗಣ್ಯರ ಸಮಕ್ಷಮ ತಾಲೂಕು ಸಮಿತಿಯ ಪಟ್ಟಿಯನ್ನು ಪ್ರಕಟಿಸಿದರು. ಗೌರವ ಮಾರ್ಗದರ್ಶಕರಾಗಿ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಪೊಳಲಿ ತಪೋವನದ ಶ್ರೀ ಸ್ವಾಮಿ ವಿವೇಕ ಚೈತನ್ಯಾನಂದ, ಬಂಟ್ವಾಳ ಕೆಥೊಲಿಕ್ ಧರ್ಮಗುರು ಅ.ವಂ.ಫಾ.ವಲೇರಿಯನ್ ಡಿಸೋಜ, ಎಸ್.ಕೆ.ಎಸ್.ಎಸ್.ಎಫ್. ಬಂಟ್ವಾಳ ವಲಯಾಧ್ಯಕ್ಷ ಇರ್ಷಾದ್ ದಾರಿಮಿ ಮಿತ್ತಬೈಲ್, ಎಸ್.ಎಸ್.ಎಫ್. ಬಂಟ್ವಾಳ ಅಧ್ಯಕ್ಷ ಸಿನಾನ್ ಸಖಾಫಿ, ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಗೌರವ ಸಲಹೆಗಾರರಾಗಿ ತಹಸೀಲ್ದಾರ್ ಡಾ.ಸ್ಮಿತಾ ರಾಮು, ತಾಪಂ ಇಒ ರಾಜಣ್ಣ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್, ಬಿಇಒ ಜ್ಞಾನೇಶ್, ಅಧ್ಯಕ್ಷರಾಗಿ ಪ್ರಕಾಶ್ ಕಾರಂತ, ಕಾರ್ಯಾಧ್ಯಕ್ಷರಾಗಿ ಪ್ರಹ್ಲಾದ್ ಶೆಟ್ಟಿ ಜಡ್ತಿಲ, ಆರ್ಥಿಕ ಸಮಿತಿ ಸಂಚಾಲಕರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಹೊರೆಕಾಣಿಕೆ ಸಮಿತಿ ಸಂಚಾಲಕರಾಗಿ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಮಹಮ್ಮದ್ ತುಂಬೆ, ಕೋಶಾಧಿಕಾರಿಯಾಗಿ ಐತಪ್ಪ ಪೂಜಾರಿ, ವಿವಿಧ ಸಮುದಾಯಗಳ ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ವಿವಿಧ ಧಾರ್ಮಿಕ, ಸಾಮಾಜಿಕ ಮುಖಂಡರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಎಲ್ಲರ ಸಮ್ಮುಖದಲ್ಲಿ ಮುಂದಿನ ಯೋಜನೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಸಮಿತಿ ಸದಸ್ಯರ ಸಹಿತ ವಿವಿಧ ಗಣ್ಯರು ಹಾಜರಿದ್ದರು.

ಜಾಹೀರಾತು

ಡಿ.18ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ತಮ್ಮ ಸಮಾಜ, ಸಂಘ, ಸಂಸ್ಥೆಗಳ ಹೆಸರಿನ ಬ್ಯಾನರ್ ನೊಂದಿಗೆ ಹೊರೆ ಕಾಣಿಕೆ ವಾಹನಗಳೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಈ ಸಂದರ್ಭ ಚಂದ್ರಹಾಸ ಶೆಟ್ಟಿ ರಂಗೋಲಿ ತಿಳಿಸಿದರು. ಟೈಗರ್, ರೋಲರ್ ಬ್ರಾಂಡಿನ ಸ್ಟೀಮ್ಡ್ ಅಕ್ಕಿ, ತರಕಾರಿ, ತೆಂಗಿನಕಾಯಿ, ಬೆಲ್ಲ, ಸಕ್ಕರೆ, ತೊಗರಿ, ಮೆಣಸು ಇನ್ನಿತರ ಸಂಬಾರು ವಸ್ತುಗಳು ಹೊರೆಕಾಣಿಕೆಯಲ್ಲಿ ಇರಲಿವೆ ಎಂದರು. ಐತಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಬಿ.ಎಂ.ತುಂಬೆ ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: ಬಂಟ್ವಾಳದಲ್ಲಿ ಸಮಿತಿ ರಚನೆ, ಸಿದ್ಧತಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*