ಸಮಾಜಸೇವಕ ಕೆ.ಸೇಸಪ್ಪ ಕೋಟ್ಯಾನ್, ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ್ ಸೇರಿದಂತೆ ಬಂಟ್ವಾಳದ ಐವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಸಮಾಜ ಸೇವಕ ಕೊಡುಗೈ ದಾನಿ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಳ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ. ಭಾಸ್ಕರ್ ರಾವ್, ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ, ಯಕ್ಷಗಾನ ಕ್ಷೇತ್ರದ ಖ್ಯಾತ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ, ದೈವ ನರ್ತಕ ವೆಂಕಪ್ಪ ನಲಿಕೆ , ಸಜೀಪ ಶಾರದ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ ಸಜೀಪ ಮುನ್ನೂರು ಇವರ ಸೇವೆ ಚಟುವಟಿಕೆಗಳನ್ನು ಗುರುತಿಸಿ ಒಟ್ಟು ಬಂಟ್ವಾಳ ಐವರಿಗೆ ಹಾಗೂ ಒಂದು ಒಂದು ಸಂಘಸಂಸ್ಥೆಗೆ ಈ ಬಾರಿಯ ಪ್ರತಿಷ್ಠಿತ ದ.ಕ.ಜಿಲ್ಲೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ

ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ
ವೆಂಕಟೇಶ ಬಂಟ್ವಾಳ
ಕಳೆದ 28 ವರ್ಷಗಳಿಂದ ಪತ್ರಕರ್ತರಾಗಿ ದುಡಿಯುತ್ತಿರುವ ಬಂಟ್ವಾಳ ಕಸ್ಬಾ ಗ್ರಾಮದ ವಿ.ಪಿ.ರಸ್ತೆ ನಿವಾಸಿ ದಿವಂಗತ ವಿಶ್ವನಾಥ ನಾಯ್ಕ್ ,ವಿಜಯ ದಂಪತಿಯ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರನಾಗಿರುವ ವೆಂಕಟೇಶ್ ಬಂಟ್ವಾಳ ಅವರು 1967 ಆಗಸ್ಟ್ 02 ರಂದು ಜನಿಸಿದ್ದರು.ತಮ್ಮ ಶಿಕ್ಷಣವನ್ನು ಬಂಟ್ವಾಳ ಎಸ್ .ವಿ .ಎಸ್ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ವೆಂಕಟೇಶ್ ಅವರು ಮಂಗಳೂರಿನಲ್ಲಿ ವಿವಿಧ ಸಂಜೆ ಪತ್ರಿಕೆ ಸಹಿತ ಪುತ್ತೂರಿನಲ್ಲಿ ಬೆಳಗ್ಗಿನ ಪತ್ರಿಕೊಂದರಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಿಸಿದ್ದರು. ಸುಮಾರು 23 ವರ್ಷಗಳಿಂದ ಹೊಸದಿಗಂತ ಪತ್ರಿಕೆಯಲ್ಲಿ ಬಂಟ್ವಾಳ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರ ಹಲವು ಸಾಮಾಜಿಕ, ಮಾನವೀಯ ವರದಿಗಳು ಮೆಚ್ಚುಗೆಗೆ ಪಾತ್ರವಾಗಿವೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದು,ಪ್ರಸ್ತುತ ಸಂಘದ ಸದಸ್ಯರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಕಾಲದಲ್ಲಿ ಇವರ ನೇತೃತ್ವದಲ್ಲಿ ಬಿ.ಸಿ.ರೋಡಿನ ಹದಗೆಟ್ಟಿದ್ದ ರಸ್ತೆ ದುರಸ್ಥಿಗಾಗಿ ನಡೆದ ವಿನೂತನ ಪ್ರತಿಭಟನೆ ಗಮನ ಸೆಳೆದಿತ್ತು. ಮಂಗಳೂರು ಗಾಳದ ಕೊಂಕಣಿ ಅಭ್ಯುದಯ ಸಂಘದ ಕಾರ್ಯದರ್ಶಿಯಾಗಿರುವುದಲ್ಲದೆ,ತೊಕ್ಕೊಟ್ಟು ಶ್ರೀ ಸೋಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತದ ನಿರ್ದೇಶಕರು,ಮುನ್ನೂರು ಗ್ರಾಮದ ಶ್ರೀ ಕ್ಷೇತ್ರ ಸೋಮನಾಥ ಉಳಿಯದ ಆಡಳಿತ ಸಮಿತಿ ಸದಸ್ಯರಾಗಿರುತ್ತಾರೆ. ರಾಜ್ಯಮಟ್ಟದ “ಸ್ವಸ್ತಿಕ್ ಸಂಭ್ರಮ್” ಪುರಸ್ಕಾರ, 2021ರ ಫೆಭ್ರವರಿ ತಿಂಗಳಲ್ಲಿ‌ ನಡೆದ ಬಂಟ್ವಾಳ ತಾಲೂಕು 21 ನೇ ಕನ್ನಡ ಸಾಹಿತ್ಯ‌ ಸಮ್ಮೇಳನ ಹಾಗೆಯೇ ವಿವಿಧ ಸಂಘ ಸಂಸ್ಥೆಗಳಿಂದ ಕಾರ್ಯ ಸಾಧನೆಗಾಗಿ ಸನ್ಮಾನಿಸಲ್ಪಟ್ಟಿರುತ್ತಾರೆ. ಬಂಟ್ವಾಳ‌ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ ಪ್ರಸ್ತುತ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರಿ ಸೇರಿದಂತೆ ಹಲವು ಸಂಘ,ಸಂಸ್ಥೆಗಳ ಮೂಲಕ ಸಾಮಾಜಿಕ ಚಟುವಟಿಕೆಯಲ್ಲು ತೊಡಗಿಸಿಕೊಂಡಿದ್ದಾರೆ.
ಪತ್ನಿ ಅನುರಾಧ,ಮಕ್ಕಳಾದ ಗಗನ್,ಯಶಸ್ವಿನಿಯೊಂದಿಗೆ ಬಂಟ್ವಾಳದಲ್ಲಿ ಗೃಹಸ್ಥ ಜೀವನ ನಡೆಸುತ್ತಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಮಾಜಸೇವಕ ಕೆ.ಸೇಸಪ್ಪ ಕೋಟ್ಯಾನ್, ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ್ ಸೇರಿದಂತೆ ಬಂಟ್ವಾಳದ ಐವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*