ಪ್ರಮುಖ ಸುದ್ದಿಗಳು

ಖ್ಯಾತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟರಿಗೆ ರಾಜ್ಯ ಸರಕಾರ ನೀಡುವ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರು ಈ ಬಾರಿ ರಾಜ್ಯ ಸರಕಾರ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಅಜಿಲಮೊಗರುವಿನಲ್ಲಿ 1961ರಲ್ಲಿ ಜನಿಸಿದ ಅವರು ನಾಟ್ಯಗುರು, ಸಮರ್ಥ ಪಾತ್ರಧಾರಿ, ಯಕ್ಷಪ್ರಸಂಗಗಳ ರಚನಾಕಾರರಾಗಿ, ಯಕ್ಷನಿರ್ದೇಶಕರಾಗಿ ಪ್ರಸಿದ್ಧರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಡ್ರೆ ಚಂದು ಅವರಿಂದ ನಾಟ್ಯಾಭ್ಯಾಸ, ಉತ್ತಮ ನೃತ್ಯಪಟು, ಅರ್ಜುನ, ದೇವೇಂದ್ರ, ರಕ್ತಬೀಜ, ಕೌಂಡ್ಲಿಕ, ಶತ್ರುಘ್ನ, ಇಂದ್ರಜಿತು ಮುಂತಾದವು ಅವರ ಜನಪ್ರಿಯ ಪಾತ್ರಗಳು. ಕಟೀಲು, ಅಳದಂಗಡಿ, ಕದ್ರಿ, ಬಪ್ಪನಾಡು, ಮಂಗಳಾದೇವಿ ಮೇಳಗಳಲ್ಲಿ ತಿರುಗಾಟ ನಡೆಸಿದ ಅವರು, ಮೇಳಗಳಲ್ಲಿ ಕಲಾವಿದನಾಗಿ, ಸಂಚಾಲಕನಾಗಿ ಕಲಾಸೇವೆ ಮಾಡಿದ್ದಾರೆ. ಉಚಿತ ನಾಟ್ಯ ತರಬೇತಿ, ಸಾವಯವ ಕೃಷಿ ವಿಜಯ ಮುಂತಾದ ಆರು ಯಕ್ಷಗಾನ ಪ್ರಸಂಗಗಳ ರಚನೆ, ನಿರ್ದೇಶನ ಮಾಡಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಹಲವು ಸಂಘ, ಸಂಸ್ಥೆಗಳಲ್ಲಿ ದುಡಿದಿರುವ ಅವರಿಗೆ ಹಲವು ಸನ್ಮಾನಗಳು, ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ಅವರ ಸರಪಾಡಿದ ಸರ್ಪೆ ಯಕ್ಷಗಾನ ಅತ್ಯಂತ ಜನಪ್ರಿಯ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.