ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು: ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ, ಕಾರ್ಯಕರ್ತರ ಸಂಭ್ರಮಾಚರಣೆ

ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಬಂಟ್ವಾಳ ಆಡಳಿತ ಸೌಧದಲ್ಲಿ ಸೋಮವಾರ ಮತ ಎಣಿಕೆ ನಡೆಯಿತು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಅವರ ಉಪಸ್ಥಿತಿಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಅವರು ಚುನಾವಣಾ ಅಧಿಕಾರಿಯಾಗಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಧಾಮಣಿ ಸಹಾಯಕ ಚುನಾವಣಾ ಅಧಿಕಾರಿ ಯಾಗಿ ಚುನಾವಣಾ ಎಣಿಕೆ ಪ್ರಕ್ರಿಯೆ ನಡೆಯಿತು. ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ, ಸಿಬ್ಬಂದಿ ಗಳಾದ ಕಿರಣ್ ಹಾಗೂ ಚಂದ್ರು ಅವರು ಸಹಕರಿಸಿದರು. ಶಾಸಕ ರಾಜೇಶ್ ನಾಯ್ಕ್ ಅವರು ವಿಜೇತ ಅಭ್ಯರ್ಥಿ ಅಪ್ಪಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ದೇವಸ್ಯಪಡೂರು ವಾರ್ಡ್ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜ್ಯೋತಿ ನಿಧನದ ಬಳಿಕ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 1070 ಮತಗಳ ಪೈಕಿ ಚಲಾಯಿತ 872 ಮತಗಳಲ್ಲಿ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಪ್ಪಿ 475 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಸುಮಿತ್ರಾ ಮೋಹನ್ ಅವರಿಗೆ 392 ಮತ ಲಭಿಸಿದ್ದವು. 5 ಮತಗಳು ಅಸಿಂಧುವಾಗಿದ್ದವು. ಈ ಹಿನ್ನೆಲೆಯಲ್ಲಿ ವಿಜೇತೆಯನ್ನು ಅಭಿನಂದಿಸಿದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಆಡಳಿತ ಸೌಧದಿಂದ ಬಿಜೆಪಿ ಕಚೇರಿಯವರೆಗೆ ಕಾರ್ಯಕರ್ತರ ಮೆರವಣಿಗೆ ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಪ್ರಮುಖರು ಇದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು: ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ, ಕಾರ್ಯಕರ್ತರ ಸಂಭ್ರಮಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*