ಬಂಟ್ವಾಳ

ಬಾಳೆಪುಣಿ – ಮನೆಯಂಗಳದಲ್ಲಿ ರಾಜ್ಯೋತ್ಸವ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಳ್ಳಾಲ ತಾಲೂಕು ಘಟಕದ ವತಿಯಿಂದ ಮುಡಿಪು ಜನಶಿಕ್ಷಣ ಟ್ರಸ್ಟ್ ಸಹಭಾಗಿತ್ವ ದಲ್ಲಿ ಮನೆಯಂಗಳದಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಬಾಳೆಪುಣಿ ಗ್ರಾಮದ ನವಗ್ರಾಮ ಇಸ್ಮಾಯಿಲ್ ಕಣ0ತೂರು ಅವರ ಮನೆಯಂಗಳದಲ್ಲಿ ನಡೆದ ಕಾರ್ಯಕ್ರಮವನ್ನು ಜನಪದ ವಿದ್ವಾಂಸ ಚಂದ್ರಹಾಸ ಕಣ0ತೂರು ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಕನ್ನಡ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಮಾಜಿ ಒಂಬಡ್ಸ್ ಮೆನ್ ಶೀನ ಶೆಟ್ಟಿ ಮನೆಯಂಗಳದಲ್ಲಿ ರಾಜ್ಯೋತ್ಸವ ಎಂಬ ಪರಿಷತ್ತಿನ ಆಶಯ ಅರ್ಥಪೂರ್ಣವಾಗಿದೆ ಎಂದರು. ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣಮೂಲ್ಯ, ಸ್ಥಳೀಯ ಪಂಚಾಯತ್ ಸದಸ್ಯೆಯರಾದ ಸೆಮೀಮ, ಜೋಹರ, ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ, ಶಾಲಾಭಿವೃದ್ಧಿ ಅಧ್ಯಕ್ಷ ಬಾವು, ಅಬೂಬಕ್ಕರ್ ಜಲ್ಲಿ, ಚೇತನ್ ಉಪಸ್ಥಿತರಿದ್ದರು. ಚಂದ್ರಶೇಖರ ಪಾತೂರು ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.