ಫರಂಗಿಪೇಟೆ

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ಸಾರ್ಟಿಸಿ ಬಸ್ ಒದಗಿಸಲು ಪುದು ಗ್ರಾಪಂ ವತಿಯಿಂದ ಮನವಿ

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪುದು ಗ್ರಾಮ ಪಂಚಾಯತ್ ವತಿಯಿಂದ ಗುರುವಾರ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪುದು ಗ್ರಾಮದ ಫರಂಗಿಪೇಟೆಯಲ್ಲಿ ಬೆಳಗ್ಗಿನ ಸಮಯ ಕೆಎಸ್ಸಾರ್ಟಿಸಿ ಬಸ್ ಗಳು ನಿಲುಗಡೆಯಾಗದೆ ಸಂಚಾರಿಸುತ್ತದೆ. ಕೆಲವು ಬಸ್ ಗಳು ಜನರಿಂದ ತುಂಬಿ ಬರುವುದರಿಂದ ಬಸ್ ಗೆ ಹತ್ತಲು ಜಾಗ ಇರುವುದಿಲ್ಲ. ಇದರಿಂದ ಮಂಗಳೂರು ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಹಾಗೂ ಕೆಲಸ ಕಾರ್ಯಕ್ಕೆ ತೆರಳುವ ಜನರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ತಿಳಿಸಿದ್ದಾರೆ.

ಜಾಹೀರಾತು

ಸಮಸ್ಯೆಯ ಬಗ್ಗೆ ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದು, ಕೂಡಲೇ ಅವರು ಕೆಎಸ್ಸಾರ್ಟಿಸಿ ವಿಭಾಗಿಯಾ ನಿಯಂತ್ರಣಾ ಅಧಿಕಾರಿ ರಾಜೇಶ್ ಶೆಟ್ಟಿ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಹಾಗೂ ಸೋಮವಾರದಿಂದ ಬೆಳಗ್ಗಿನ ಸಮಯ ಫರಂಗಿಪೇಟೆಯಿಂದಲೇ ಎರಡು ಬಸ್ ಗಳು ಬಿಡುವಂತೆ ಸೂಚಿಸಿದರು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ ತಿಳಿಸಿದರು.

ಜನರಿಂದ ನಿರಂತರ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಗ್ರಾಪಂ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಸರಕಾರಿ ಬಸ್ ಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳು ಹಾಗೂ ಜನರನ್ನು ಹತ್ತಿಸುವ ಮೂಲಕ ದಿನನಿತ್ಯ ಇಲ್ಲಿ ಬಸ್ ನಿಲ್ಲಿಸುವಂತೆ ಚಾಲಜರಿಗೆ ತಿಳಿಸಲಾಯಿತು. ಬಳಿಕ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಶಾಸಕ ಯು.ಟಿ.ಖಾದರ್ ಕೂಡಾ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಸಮಸ್ಯೆಗೆ ಕೂಡಲೇ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಉಮರ್ ಫಾರೂಕ್ ತಿಳಿಸಿದರು. ಕೆಎಸ್ಸಾರ್ಟಿಸಿ ಸಹಾಯಕ ಸಂಚಾರ ವ್ಯವಸ್ಥಾಪಕಿ ನಿರ್ಮಲಾ ಎ. ಮನವಿ ಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಸದಸ್ಯರಾದ ಝೀನತ್, ಲವಿನಾ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.