ಬಂಟ್ವಾಳ

ಬಂಟ್ವಾಳಕ್ಕೆ ತಲುಪಿದ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮೃತ್ತಿಕೆ ಸಂಗ್ರಹ ಅಭಿಯಾನ ರಥ

ಬಂಟ್ವಾಳನ್ಯೂಸ್

ಬಂಟ್ವಾಳ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಗೆ ನಾಡಿನ ಪವಿತ್ರ ಸ್ಥಳಗಳಿಂದ ಪವಿತ್ರ ಮೃತ್ತಿಗೆ ಸಂಗ್ರಹ ಅಭಿಯಾನ ರಥ ಸಂಚರಿಸುತ್ತಿದ್ದು, ಬಂಟ್ವಾಳ ತಾಲೂಕಿಗೆ ಶನಿವಾರ ಪ್ರವೇಶಿಸಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಾಣಿ ಕೊಡಾಜೆಯಲ್ಲಿ ರಥವನ್ನು ಸ್ವಾಗತಿಸಿದರು.

ಮಾಣಿ ಕೊಡಾಜೆ ಮೂಲಕ ಕಲ್ಲಡ್ಕ, ಮೆಲ್ಕಾರ್ ರಸ್ತೆಯ ಮೂಲಕ ಸಾಗಿದ ರಥ ಸಂಜೆ ಬಿ.ಸಿ ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಸಾಗಿ ಬಿ.ಸಿ ರೋಡ್ ತಾಲೂಕು ಕಚೇರಿಯವರಗೆ ಸಾಗಿ ಬಂತು. ಬಿ.ಸಿ ರೋಡ್ ತಾಲೂಕು ಕಚೇರಿ ಮುಂಭಾಗ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಕೆಂಪೇಗೌಡರ ಕುರಿತು ಮಾತನಾಡಿ ಪ್ರಜೆಗಳನ್ನು ಮಕ್ಕಳಂತೆ ಪ್ರೀತಿಸಿದ, ಪ್ರಜಾಪ್ರೇಮಿ ಕೆಂಪೇಗೌಡರು ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿ ರಥಯಾತ್ರೆ ನಮ್ಮ ಕ್ಷೇತ್ರಕ್ಕೆ ಬಂದಿದ್ದು, ಯಶಸ್ಸಿಗೆ ಶುಭ ಹಾರೈಸುತ್ತೇನೆ ಎಂದರು.

ಜಾಹೀರಾತು

ತಹಸೀಲ್ದಾರ್ ಡಾ.ಸ್ಮಿತಾ ರಾಮು, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬುಡ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಶಾರದಾ ಅಂಧರ ಗೀತಾ ತಂಡದ ಅಂಧ ಕಲಾವಿದರು ನಡೆಸಿಕೊಟ್ಟರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಕಂದಾಯ ನಿರೀಕ್ಷಕ ಜನಾರ್ದನ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ