ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಬಾಲಬಂಧು ಪ್ರಶಸ್ತಿಗೆ ಮೌನೇಶ ವಿಶ್ವಕರ್ಮ ಆಯ್ಕೆ

ಹಲವು ಸಂಸ್ಥೆಗಳಲ್ಲಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಮಕ್ಕಳಿಗೆ ಸಹಕರಿಸಿದ ಸಾಧಕರಲ್ಲಿ ರಂಗಕರ್ಮಿ ಪತ್ರಕರ್ತ ಮೌನೇಶ ವಿಶ್ವಕರ್ಮ ಅವರನ್ನು ಬಾಲಬಂಧು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಬಂಟ್ವಾಳನ್ಯೂಸ್ ವರದಿ:

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಓಜಾಲ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ. 13ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸ ಬಹುದೆಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ತಿಳಿಸಿರುವರು.

ಜಾಹೀರಾತು

     18 ವರ್ಷ ವಯೋಮಾನದ ವಿದ್ಯಾರ್ಥಿಗಳಿರುವ ತಾಲೂಕಿನೊಳಗಿರುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳಲ್ಲಿ ಐದು ವರ್ಷಗಳಿಂದೀಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ಆಧಾರದಲ್ಲಿ  ಸಾಹಿತ್ಯ ತಾರೆ ಪುರಸ್ಕಾರಕ್ಕೆ ವಿಟ್ಲ ಬಸವನಗುಡಿಯಲ್ಲಿರುವ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯನ್ನು ಆಯ್ಕೆ ಮಾಡಲಾಗಿದೆ. ಹಲವು ಸಂಸ್ಥೆಗಳಲ್ಲಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಮಕ್ಕಳಿಗೆ ಸಹಕರಿಸಿದ ಸಾಧಕರಲ್ಲಿ ರಂಗಕರ್ಮಿ ಪತ್ರಕರ್ತ ಮೌನೇಶ ವಿಶ್ವಕರ್ಮ ಅವರನ್ನು ಬಾಲಬಂಧು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಸಮ್ಮೇಳನದಂದು ಸಾಹಿತ್ಯ ತಾರೆ ಮತ್ತು ಬಾಲಬಂಧು ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು. ಸಮ್ಮೇಳನದಲ್ಲಿ 18 ವಯೋಮಾನದೊಳಗಿನ ಮಕ್ಕಳಿಗೆ ಚಿತ್ತ ಚಿತ್ತಾರ, ಮಾತು ಕತೆ, ಸಾಹಿತ್ಯ ರಚನೆ, ಸಾಹಿತ್ಯ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ರಮೇಶ ಎಂ ಬಾಯಾರು ತಿಳಿಸಿರುವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಬಾಲಬಂಧು ಪ್ರಶಸ್ತಿಗೆ ಮೌನೇಶ ವಿಶ್ವಕರ್ಮ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*