ಮಾಣೂರು: ಇರ್ಷಾದಿಯಾ ಫ್ರೆಂಡ್ಸ್ ಅಸ್ತಿತ್ವಕ್ಕೆ, ಅಧ್ಯಕ್ಷರಾಗಿ ಬಶೀರ್ ಆಯ್ಕೆ

ಬಂಟ್ವಾಳ: ತುಂಬೆ ಗ್ರಾಮದ ಮಾಣೂರು ಎಂಬಲ್ಲಿ ನ. ೧ ರಂದು ಇರ್ಷಾದುಲ್ ಇಸ್ಲಾಂ ಮದರಸ ಮಾಣೂರು ವಠಾರದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಉದ್ದೇಶಕ್ಕಾಗಿ ಇರ್ಷಾದಿಯಾ ಫ್ರೆಂಡ್ಸ್ ಸಂಸ್ಥೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗೌರವ ಸಲಹೆಗಾರ ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ ಮಾತನಾಡಿ
ಸಂಘಟನೆಗಳನ್ನು ತೆರೆಯುವುದು ಮುಖ್ಯವಲ್ಲ ಅದನ್ನು ಉತ್ತಮ ರೀತಿಯಲ್ಲಿ ಮುಂದುವರೆಸಿಕೊಂಡು ಹೋಗುವುದು ಮುಖ್ಯವಾಗಿದೆ, ಸಂಸ್ಥೆಯ ಒಂದು ಪೈಸೆಯಾದರೂ ವೈಯಕ್ತಿಕ ಉದ್ದೇಶಕ್ಕೆ ಉಪಯೋಗವಾಗವಾಗದಿರಲಿ ಎಂದು ಸಂದೇಶ ನೀಡಿ ಪ್ರಾರ್ಥನೆ ನೆರವೇರಿಸಿ ಚಾಲನೆ ನೀಡಿದರು. ಇರ್ಷಾದಿಯಾ ಫ್ರೆಂಡ್ಸ್ ಮಾಣೂರು ಗೌರವಾಧ್ಯಕ್ಷರಾಗಿ ಎಂ.ಎಚ್.ಹಸನಬ್ಬಗೌರವ ಸಲಹೆಗಾರರಾಗಿ ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ, ಹಮೀದ್ ಮುಸ್ಲಿಯಾರ್ ಮತ್ತು ಹಮೀದ್ ವಾಟರ್ ಸಪ್ಲೈ, ಅಧ್ಯಕ್ಷರಾಗಿ ಬಶೀರ್ ಉಮನಗುಡ್ಡೆ, ಉಪಾಧ್ಯಕ್ಷರಾಗಿ ಶಹರೋಝ್, ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ, ಕಾರ್ಯದರ್ಶಿಯಾಗಿ ಅಕ್ಬರ್ ಅಲಿ, ಕೋಶಾಧಿಕಾರಿಯಾಗಿ ಸದ್ದಾಂ ಮಾಣೂರು ಅವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಮಾಣೂರು, ಸಂಶೀರ್ ಮಾಣೂರು, ಉಮರಬ್ಬ, ಮಜೀದ್, ಶಬೀರ್ ಮಾಣೂರು, ಇಸ್ಮಾಯಿಲ್ ಮಾಣೂರು, ಬದ್ರುದ್ದೀನ್ ಮಾಣೂರು, ಅಝ್ಮಾಲ್, ಫಯಾಝ್, ಮುಹಾಝ್, ಬಿಲಾಲ್, ಸಾಹಿಲ್, ಬದ್ರುದ್ದೀನ್ ಡಿ. ಅವರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಶೀರ್ ಉಮನಗುಡ್ಡೆ ಅವರನ್ನು ಶಾಲುಹೊದಿಸಿ ಸನ್ಮಾನಿಸಲಾಯಿತು.
ಅಕ್ಬರ್ ಮಾಣೂರು ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣೂರು: ಇರ್ಷಾದಿಯಾ ಫ್ರೆಂಡ್ಸ್ ಅಸ್ತಿತ್ವಕ್ಕೆ, ಅಧ್ಯಕ್ಷರಾಗಿ ಬಶೀರ್ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*