ಬಂಟ್ವಾಳ

ಕಟ್ಟಡ ಕಾರ್ಮಿಕರ ನೆಪದಲ್ಲಿ ಬೋಗಸ್ ಸದಸ್ಯತ್ವ: ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಆರೋಪ

ಬಂಟ್ವಾಳನ್ಯೂಸ್



ಬಂಟ್ವಾಳ: ಕಟ್ಟಡ ಕಾರ್ಮಿಕರ ಹೆಸರಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಲವರು ಬೋಗಸ್ ಸದಸ್ಯತ್ವ ಮಾಡುತ್ತಿದ್ದು, ದಾರಿಯಲ್ಲಿ ಹೋಗುವವರೆಲ್ಲರೂ ಕಟ್ಟಡ ಕಾರ್ಮಿಕರ ನೆಪದಲ್ಲಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ, ನಿಜವಾದ ಕಾರ್ಮಿಕರ ಸಮಸ್ಯೆ ಕೇಳುವವರಿಲ್ಲವಾಗಿದೆ ಎಂದು ಎಐಟಿಯುಸಿ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ. ಆರೋಪಿಸಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಸಂಘಟಿತ ಕಾರ್ಮಿಕರಿಗೆ ರಾಜ್ಯದಲ್ಲಿ ಜೀವನ ನಡೆಸುವುದು ದುಸ್ತರವಾಗಿದ್ದು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ, ಅವೈಜ್ಞಾನಿಕ ಕೂಲಿಯನ್ನು ನೀಡಲಾಗುತ್ತಿದ್ದು, ಈ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ, ಕನಿಷ್ಠ ವೇತನ, ಕನಿಷ್ಠ ಪಿಂಚಣಿಯ ಮೊತ್ತ ಏರಿಸುವುದೇ ಮೊದಲಾದ ವಿಚಾರಗಳನ್ನು ಮುಂದಿಟ್ಟು ಜನವರಿಯಲ್ಲಿ ಎಐಟಿಯುಸಿ ಸಹಿತ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ರೈತ ಸಮುದಾಯದ ಬಿಟ್ಟರೆ ಅತೀ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುವ ವರ್ಗ ಇದ್ದರೆ ಕೆಎಸ್ಆರ್ಟಿಸಿನೌಕರರು ಅವರ ಸಮಸ್ಯೆಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಸುಧಾರಣೆ ಮಾಡಬೇಕು ಎಂದರು. ಎಐಟಿಯುಸಿ ಉಡುಪಿ, ದ.ಕ.ಜಿಲ್ಲಾಧ್ಯಕ್ಷ ಎಚ್.ವಿ.ರಾವ್, ಕಾರ್ಯದರ್ಶಿ ಬಿ.ಶೇಖರ್, ಪ್ರಮುಖರಾದ ಸುರೇಶ್ ಕುಮಾರ್ ಬಂಟ್ವಾಳ, ಸೀತಾರಾಮ ಬೇರಿಂಜ, ಪ್ರವೀಣ್ ಕುಮಾರ್, ಕರುಣಾಕರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

35 minutes ago