ಬಂಟ್ವಾಳ

ಕಟ್ಟಡ ಕಾರ್ಮಿಕರ ನೆಪದಲ್ಲಿ ಬೋಗಸ್ ಸದಸ್ಯತ್ವ: ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಆರೋಪ

ಬಂಟ್ವಾಳನ್ಯೂಸ್



ಬಂಟ್ವಾಳ: ಕಟ್ಟಡ ಕಾರ್ಮಿಕರ ಹೆಸರಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಲವರು ಬೋಗಸ್ ಸದಸ್ಯತ್ವ ಮಾಡುತ್ತಿದ್ದು, ದಾರಿಯಲ್ಲಿ ಹೋಗುವವರೆಲ್ಲರೂ ಕಟ್ಟಡ ಕಾರ್ಮಿಕರ ನೆಪದಲ್ಲಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ, ನಿಜವಾದ ಕಾರ್ಮಿಕರ ಸಮಸ್ಯೆ ಕೇಳುವವರಿಲ್ಲವಾಗಿದೆ ಎಂದು ಎಐಟಿಯುಸಿ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ. ಆರೋಪಿಸಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಸಂಘಟಿತ ಕಾರ್ಮಿಕರಿಗೆ ರಾಜ್ಯದಲ್ಲಿ ಜೀವನ ನಡೆಸುವುದು ದುಸ್ತರವಾಗಿದ್ದು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ, ಅವೈಜ್ಞಾನಿಕ ಕೂಲಿಯನ್ನು ನೀಡಲಾಗುತ್ತಿದ್ದು, ಈ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ, ಕನಿಷ್ಠ ವೇತನ, ಕನಿಷ್ಠ ಪಿಂಚಣಿಯ ಮೊತ್ತ ಏರಿಸುವುದೇ ಮೊದಲಾದ ವಿಚಾರಗಳನ್ನು ಮುಂದಿಟ್ಟು ಜನವರಿಯಲ್ಲಿ ಎಐಟಿಯುಸಿ ಸಹಿತ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ರೈತ ಸಮುದಾಯದ ಬಿಟ್ಟರೆ ಅತೀ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುವ ವರ್ಗ ಇದ್ದರೆ ಕೆಎಸ್ಆರ್ಟಿಸಿನೌಕರರು ಅವರ ಸಮಸ್ಯೆಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಸುಧಾರಣೆ ಮಾಡಬೇಕು ಎಂದರು. ಎಐಟಿಯುಸಿ ಉಡುಪಿ, ದ.ಕ.ಜಿಲ್ಲಾಧ್ಯಕ್ಷ ಎಚ್.ವಿ.ರಾವ್, ಕಾರ್ಯದರ್ಶಿ ಬಿ.ಶೇಖರ್, ಪ್ರಮುಖರಾದ ಸುರೇಶ್ ಕುಮಾರ್ ಬಂಟ್ವಾಳ, ಸೀತಾರಾಮ ಬೇರಿಂಜ, ಪ್ರವೀಣ್ ಕುಮಾರ್, ಕರುಣಾಕರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ