ಹಿರಿಯ ಸಾಹಿತಿ ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನಿರತ ಪ್ರಶಸ್ತಿ ಪ್ರದಾನ

ಬಂಟ್ವಾಳನ್ಯೂಸ್

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಹಿನ್ನೆಲೆಯಲ್ಲಿ ಬಿ .ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ಭಾನುವಾರ ನಡೆದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ  ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನಿರತ ಪ್ರಶಸ್ತಿ-೨೦೨೨ನ್ನು ಪ್ರದಾನ ಮಾಡಲಾಯಿತು.

ಸಾಹಿತ್ಯ ಕ್ಷೇತ್ರದ ಸಂಘಟನೆಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸಂಘಟನೆಯನ್ನು ಬಲಪಡಿಸಿರುವ ತೃಪ್ತಿ ಹೊಂದಿದ್ದೆನೆ ಎಂದ ಪ್ರೊ. ಚಂದ್ರಕಲಾ, ಓದುಗನ ಓದಿನಿಂದಾಗಿ ಕವಿತೆಗಳು ಉತ್ತಮವಾಗಿ ಮೂಡಿಬರುವುದರಿಂದ ಕವಿತೆಯ ಓದುವಿಕೆ ಕೂಡ ಮುಖ್ಯವಾಗಿದೆ, ನಿನಗೆ ನೀನೇ ಬಂಧು, ನಿನಗೆ ನೀನೇ ಶತ್ರು ಎಂಬುದನ್ನು ಅರಿಯಬೇಕು ಎಂದು ಹೇಳಿದರು.

ಜಾಹೀರಾತು

ನಿವೃತ್ತ ಪ್ರಿನ್ಸಿಪಾಲ್ ಡಾ. ಎನ್.ಇಸ್ಮಾಯಿಲ್ ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭ ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ, ರಂಗಕರ್ಮಿ ಸದಾಶಿವ ಡಿ.ತುಂಬೆ ಅತಿಥಿಗಳಾಗಿ ಭಾಗವಹಿಸಿದ್ದರು. ನಿರತ ಸಾಹಿತ್ಯ ಸಂಪದದ ಗೌರವಾಧ್ಯಕ್ಷ ವಿ ಸುಬ್ರಹ್ಮಣ್ಯ ಭಟ್ ಆಧ್ಯಕ್ಷತೆ ವಹಿಸಿದ್ದರು

ಕಾರ್ಯಕ್ರಮಕ್ಕೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಗಿಡಕ್ಕೆ ನೀರೆರೆಯುವ ಮೂಲಕ  ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಇಪ್ಪತ್ತೈದರ ಯೌವನದ ಹಂತದಲ್ಲಿರುವ ಸಂಸ್ಥೆ ಅಭಿವೃದ್ಧಿಯಾಗಲು ಸದಸ್ಯರ ಶ್ರಮ ಕಾರಣ ಎಂದು ಶುಭ ಹಾರೈಸಿದರು.

ತುಂಬೆ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಕೆ.ಎನ್.ಗಂಗಾಧರ ಆಳ್ವ ಅನಿಯತಕಾಲಿಕ ಸಂಚಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ನಿವೃತ್ತ ಶಿಕ್ಷಕ ಬಿ. ಮುಹಮ್ಮದ್ ತುಂಬೆ, ತುಂಬೆ ಗ್ರಾಪಂ ಅಧ್ಯಕ್ಷ ಪ್ರವೀಣ್ ಬಿ ತುಂಬೆ, ನಿರತ ಸಂಪದ ಅಧ್ಯಕ್ಷ ಬೃಜೇಶ್ ಅಂಚನ್, ಪದಾಧಿಕಾರಿಗಳಾದ ದಿನೇಶ್ ಎನ್. ತುಂಬೆ, ಸುಧಾ ನಾಗೇಶ್, ಅಬ್ದುಲ್ ರಹಿಮಾನ್ ಡಿ.ಬಿ, ಪ್ರೊ.ಎಂ.ಡಿ.ಮಂಚಿ, ಗೀತಾ ಎಸ್.ಕೊಂಕೋಡಿ, ವಿನೋದ್ ಪುದು, ಕರುಣಾಕರ ಮಾರಿಪಳ್ಳ, ಅಬ್ದುಲ್ ಮಜೀದ್ ಎಸ್, ಅಶೋಕ್ ತುಂಬೆ, ಜಯರಾಮ ಪಡ್ರೆ, ತಾರಾನಾಥ ಕೈರಂಗಳ ಉಪಸ್ಥಿತರಿದ್ದರು.

ಜಾಹೀರಾತು

ಬಳಿಕ ಗಣೇಶ ಪ್ರಸಾದ ಪಾಂಡೇಲು ಅಧ್ಯಕ್ಷತೆಯಲ್ಲಿ ಕವಿಗೋಷ್ಟಿ ನಡೆಯಿತು, ಉದ್ಯಮಿ ಜಗನ್ನಾಥ ಚೌಟ, ಪ್ರಮುಖರಾದ ಸುಬ್ರಾಯ ಭಟ್, ಅನಿಲ್ ಪಂಡಿತ್ ಉಪಸ್ಥಿತರಿದ್ದರು. ಸುಮಾರು 25 ಕವಿಗಳು ಕವನ ವಾಚನ ಮಾಡಿದರು.

ದಿನೇಶ್ ಶೆಟ್ಟಿ ಅಳಿಕೆ, ದೇವದಾಸ್ ಅರ್ಕುಳ, ಜಯರಾಮ‌ ಪಡ್ರೆ ಮತ್ತು ಬಳಗದವರಿಂದ ಜಾಂಬವತಿ ಪರಿಣಯ ಪ್ರಸಂಗದ ಯಕ್ಷ ಸಂವಾದ ನಡೆಯಿತು. ವಿದ್ಯಾರ್ಥಿಗಳಿಂದ ಬಣ್ಣದ ಝೇಂಕಾರ, ಗಾಯನ, ನೃತ್ಯ ನಡೆಯಿತು.  ನಿರತ ಸಂಪದದ ಅಧ್ಯಕ್ಷ ಬೃಜೇಶ್ ಅಂಚನ್ ಸ್ವಾಗತಿಸಿದರು. ಬಿ.ಎಂ.ರಫೀಕ್ ಕಾರ್ಯಕ್ರಮ ನಿರ್ವಹಿಸಿದರು. ಕರುಣಾಕರ ಮಾರಿಪಳ್ಳ ವಂದಿಸಿದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿರಿಯ ಸಾಹಿತಿ ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನಿರತ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*