ಬಂಟ್ವಾಳ

ಹಿರಿಯ ಸಾಹಿತಿ ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನಿರತ ಪ್ರಶಸ್ತಿ ಪ್ರದಾನ

ಬಂಟ್ವಾಳನ್ಯೂಸ್

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಹಿನ್ನೆಲೆಯಲ್ಲಿ ಬಿ .ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ಭಾನುವಾರ ನಡೆದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ  ಪ್ರೊ.ಚಂದ್ರಕಲಾ ನಂದಾವರ ಅವರಿಗೆ ನಿರತ ಪ್ರಶಸ್ತಿ-೨೦೨೨ನ್ನು ಪ್ರದಾನ ಮಾಡಲಾಯಿತು.

ಸಾಹಿತ್ಯ ಕ್ಷೇತ್ರದ ಸಂಘಟನೆಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸಂಘಟನೆಯನ್ನು ಬಲಪಡಿಸಿರುವ ತೃಪ್ತಿ ಹೊಂದಿದ್ದೆನೆ ಎಂದ ಪ್ರೊ. ಚಂದ್ರಕಲಾ, ಓದುಗನ ಓದಿನಿಂದಾಗಿ ಕವಿತೆಗಳು ಉತ್ತಮವಾಗಿ ಮೂಡಿಬರುವುದರಿಂದ ಕವಿತೆಯ ಓದುವಿಕೆ ಕೂಡ ಮುಖ್ಯವಾಗಿದೆ, ನಿನಗೆ ನೀನೇ ಬಂಧು, ನಿನಗೆ ನೀನೇ ಶತ್ರು ಎಂಬುದನ್ನು ಅರಿಯಬೇಕು ಎಂದು ಹೇಳಿದರು.

ಜಾಹೀರಾತು

ನಿವೃತ್ತ ಪ್ರಿನ್ಸಿಪಾಲ್ ಡಾ. ಎನ್.ಇಸ್ಮಾಯಿಲ್ ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭ ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ, ರಂಗಕರ್ಮಿ ಸದಾಶಿವ ಡಿ.ತುಂಬೆ ಅತಿಥಿಗಳಾಗಿ ಭಾಗವಹಿಸಿದ್ದರು. ನಿರತ ಸಾಹಿತ್ಯ ಸಂಪದದ ಗೌರವಾಧ್ಯಕ್ಷ ವಿ ಸುಬ್ರಹ್ಮಣ್ಯ ಭಟ್ ಆಧ್ಯಕ್ಷತೆ ವಹಿಸಿದ್ದರು

ಕಾರ್ಯಕ್ರಮಕ್ಕೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಗಿಡಕ್ಕೆ ನೀರೆರೆಯುವ ಮೂಲಕ  ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಇಪ್ಪತ್ತೈದರ ಯೌವನದ ಹಂತದಲ್ಲಿರುವ ಸಂಸ್ಥೆ ಅಭಿವೃದ್ಧಿಯಾಗಲು ಸದಸ್ಯರ ಶ್ರಮ ಕಾರಣ ಎಂದು ಶುಭ ಹಾರೈಸಿದರು.

ತುಂಬೆ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಕೆ.ಎನ್.ಗಂಗಾಧರ ಆಳ್ವ ಅನಿಯತಕಾಲಿಕ ಸಂಚಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ನಿವೃತ್ತ ಶಿಕ್ಷಕ ಬಿ. ಮುಹಮ್ಮದ್ ತುಂಬೆ, ತುಂಬೆ ಗ್ರಾಪಂ ಅಧ್ಯಕ್ಷ ಪ್ರವೀಣ್ ಬಿ ತುಂಬೆ, ನಿರತ ಸಂಪದ ಅಧ್ಯಕ್ಷ ಬೃಜೇಶ್ ಅಂಚನ್, ಪದಾಧಿಕಾರಿಗಳಾದ ದಿನೇಶ್ ಎನ್. ತುಂಬೆ, ಸುಧಾ ನಾಗೇಶ್, ಅಬ್ದುಲ್ ರಹಿಮಾನ್ ಡಿ.ಬಿ, ಪ್ರೊ.ಎಂ.ಡಿ.ಮಂಚಿ, ಗೀತಾ ಎಸ್.ಕೊಂಕೋಡಿ, ವಿನೋದ್ ಪುದು, ಕರುಣಾಕರ ಮಾರಿಪಳ್ಳ, ಅಬ್ದುಲ್ ಮಜೀದ್ ಎಸ್, ಅಶೋಕ್ ತುಂಬೆ, ಜಯರಾಮ ಪಡ್ರೆ, ತಾರಾನಾಥ ಕೈರಂಗಳ ಉಪಸ್ಥಿತರಿದ್ದರು.

ಬಳಿಕ ಗಣೇಶ ಪ್ರಸಾದ ಪಾಂಡೇಲು ಅಧ್ಯಕ್ಷತೆಯಲ್ಲಿ ಕವಿಗೋಷ್ಟಿ ನಡೆಯಿತು, ಉದ್ಯಮಿ ಜಗನ್ನಾಥ ಚೌಟ, ಪ್ರಮುಖರಾದ ಸುಬ್ರಾಯ ಭಟ್, ಅನಿಲ್ ಪಂಡಿತ್ ಉಪಸ್ಥಿತರಿದ್ದರು. ಸುಮಾರು 25 ಕವಿಗಳು ಕವನ ವಾಚನ ಮಾಡಿದರು.

ದಿನೇಶ್ ಶೆಟ್ಟಿ ಅಳಿಕೆ, ದೇವದಾಸ್ ಅರ್ಕುಳ, ಜಯರಾಮ‌ ಪಡ್ರೆ ಮತ್ತು ಬಳಗದವರಿಂದ ಜಾಂಬವತಿ ಪರಿಣಯ ಪ್ರಸಂಗದ ಯಕ್ಷ ಸಂವಾದ ನಡೆಯಿತು. ವಿದ್ಯಾರ್ಥಿಗಳಿಂದ ಬಣ್ಣದ ಝೇಂಕಾರ, ಗಾಯನ, ನೃತ್ಯ ನಡೆಯಿತು.  ನಿರತ ಸಂಪದದ ಅಧ್ಯಕ್ಷ ಬೃಜೇಶ್ ಅಂಚನ್ ಸ್ವಾಗತಿಸಿದರು. ಬಿ.ಎಂ.ರಫೀಕ್ ಕಾರ್ಯಕ್ರಮ ನಿರ್ವಹಿಸಿದರು. ಕರುಣಾಕರ ಮಾರಿಪಳ್ಳ ವಂದಿಸಿದರು. 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts