ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಸಲ್ಮಾನ್ (15) ಮೃತಪಟ್ಟ ಬಾಲಕ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯ ಕುರಿತು ದುಃಖ ವ್ಯಕ್ತಪಡಿಸಿರುವ ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮರಣೋತ್ತರ ಪ್ರಕ್ರಿಯೆಗಳ ಸಂದರ್ಭ ಮನೆಯವರೊಂದಿಗಿದ್ದು ಧೈರ್ಯ ಹೇಳಿದರು.
(more…)