ಬಂಟ್ವಾಳ

ಬಂಟ್ವಾಳದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಸಭೆ

ಜಾಹೀರಾತು

ಬಂಟ್ವಾಳ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆ,ಬಂಟ್ವಾಳದ ಕನ್ನಡ ಭವನದಲ್ಲಿ ನಡೆಯಿತು.

ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ‌ ಮುಖ್ಯಾಂಶಗಳು, ಜಿಲ್ಲಾ ಸಮ್ಮೇಳನ ನಡೆಸುವ ಕುರಿತು ತಾಲ್ಲೂಕಿನ ಸಾಹಿತ್ಯಿಕ ವಿವರಗಳು,ಸದಸ್ಯತ್ವ ಅಭಿಯಾನ ಹಾಗೂ ಅಧ್ಯಕ್ಷರ ಅನುಮತಿಯೊಂದಿಗೆ  ಇತರ ವಿಚಾರಗಳನ್ನು ಚರ್ಚಿಸಲಾಯಿತು.

ಜಾಹೀರಾತು

ಈ ಸಂದರ್ಭ ಈ ವರ್ಷದ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಯದುಪತಿ ಗೌಡ ಅವರನ್ನು ಪರಿಷತ್ತು ವತಿಯಿಂದ ಗೌರವಿಸಲಾಯಿತು. ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ  ಡಾ. ಮಾಧವ ಮೂಡುಕೊಣಾಜೆ ಅಭಿನಂದನಾ ನುಡಿಗಳನ್ನಾಡಿದರು.

ಗೌರವ ಕೋಶಾಧ್ಯಕ್ಷರಾದ ಬಿ.ಐತಪ್ಪ ನಾಯ್ಕ್, ಗೌರವ ಕಾರ್ಯದರ್ಶಿಗಳಾದ  ಎಚ್ ವಿನಯ ಆಚಾರ್, ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ತಿನ  ಪದಾಧಿಕಾರಿಗಾಳಾದ ಕೆ.ಸೇಸಪ್ಪ ರೈ ಕಡಬ, ಚಂದ್ರಶೇಖರ ಪೇರಾಲು ಸುಳ್ಯ, ಡಾ. ಡಿ. ಯದುಪತಿ ಗೌಡ ಬೆಳ್ತಂಗಡಿ, ಉಮೇಶ ನಾಯಕ್ ಪುತ್ತೂರು, ವಿಶ್ವನಾಥ ಬಂಟ್ವಾಳ, ಡಾ. ಮಂಜುನಾಥ ಎಸ್ ಮಂಗಳೂರು, ವೇಣುಗೋಪಾಲ ಶೆಟ್ಟಿ ಮೂಡಬಿದಿರೆ, ಮೋಹನದಾಸ ಸುರತ್ಕಲ್, ಪೂವಪ್ಪ ನೇರಳಕಟ್ಟೆ, ರಾಮಚಂದ್ರ ಪಳ್ಳತ್ತಡ್ಕ, ತೇಜಸ್ವಿ ಅಂಬೆಕಲ್ಲು, ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ‌ ಗೌರವ ಕಾರ್ಯದರ್ಶಿಗಳಾದ ರಾಜೇಶ್ವರಿ ಎಂ.ಕಾರ್ಯಕ್ರಮ ನಿರೂಪಿಸಿ,ಧನ್ಯವಾದಗೈದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ