ಕಲ್ಲಡ್ಕ

ಕಲ್ಲಡ್ಕ ಬಿಲ್ಲವ ಸಮಾಜದಿಂದ ಗುರುಪೂಜೆ, ಭಜನಾ ಸಂಕೀರ್ತನೆ: ಪ್ರಣವಾನಂದ ಸ್ವಾಮೀಜಿ ಭಾಗಿ

ಬಂಟ್ವಾಳ: ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ತಾಳೂಕಿನ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆದ ಗುರುಪೂಜೆ, ಭಜನಾ ಸಂಕೀರ್ತನೆ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರೆದಾಲ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಿದರು.

ಜಾಹೀರಾತು

ರಾಜಕೀಯವನ್ನು ಬದಿಗಿಟ್ಟು ಸಮಾಜ ಬಾಂಧವರು ಎಲ್ಲರೂ ಒಟ್ಟಾಗಿ  ಕೆಲಸ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸ್ವಾಮೀಜಿ ಹೇಳಿದರು.

ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಅಧ್ಯಕ್ಷತೆಯಲ್ಲಿ .ಉದ್ಘಾಟನೆಯನ್ನು ಮಾಜಿ ಶಾಸಕ ಎ ರುಕ್ಮಯ ಪೂಜಾರಿ ನೆರವೇರಿಸಿದರು. ರೇಣುಕಾ ಕಣಿಯೂರು ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ಉಪನ್ಯಾಸ ನೀಡಿದರು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮವನ್ನು ಸರಕಾರ ಮಾಡಬೇಕೆಂದು ಒತ್ತಾಯಿಸಿದರು.

ವಿವಿಧ ಪ್ರಮುಖರಾದ ಮನೋಜ್ ಕುಮಾರ್ ಕಟ್ಟೆಮಾರ್, ಬೇಬಿ ಕುಂದರ್, , ರಾಘವ ಅಮೀನ್, ರವಿಶಂಕರ್, ಸದಾನಂದ ಪೂಜಾರಿ, ಶೋರ್ ಕುಮಾರ್ ಕಟ್ಟೆಮರ್, ಯೋಗೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು, ಸಾಧಕರ ಸನ್ಮಾನ, ವೈವಿಧ್ಯ ಕಾರ್ಯಕ್ರಮ ನಡೆದವು. ಬಿಲ್ಲವ ಸಮಾಜ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಹೊಸಕಟ್ಟ ಸ್ವಾಗತಿಸಿ, ವಸಂತ ಭಟ್ಟಿಹಿತ್ಲು ಧನ್ಯವಾದ ನೀಡಿದರು. ಸಂತೋಷ್ ಕುಮಾರ್ ಬೊಲ್ಪೋಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ