ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗದ `ಪಿಂಛಿ ಪರಿವರ್ತನಾ ಮಹೋತ್ಸವ’

ಬಂಟ್ವಾಳ: ಸಂಸಾರ, ಶರೀರ ಮತ್ತು ಭೋಗದಿಂದ ಭವ್ಯಾತ್ಮ ವಿರಕ್ತವಾಗುತ್ತದೆ. ಇದರಿಂದ ಆತ್ಮವನ್ನು ಅರಿತುಕೊಂಡು ಕಲ್ಯಾಣ ಮಾರ್ಗದಲ್ಲಿ ಸಾಗುತ್ತದೆ. ರತ್ನತ್ರಯ ಧಾರಣೆಯಿಂದ ಆತ್ಮ ಕಲ್ಯಾಣವಾಗುತ್ತದೆ. ಈ ಭುವಿಯಲ್ಲಿ 24 ತೀರ್ಥಂಕರರ ಉಪದೇಶಗಳಿಂದ ಮೋಕ್ಷ ಮಾರ್ಗ ದೊರಕುತ್ತದೆ ಎಂದು ಮುನಿಶ್ರೀ 108 ದಿವ್ಯಸಾಗರ ಮಹಾರಾಜ ಹೇಳಿದರು.

ಜಾಹೀರಾತು

ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗದ `ಪಿಂಛಿ ಪರಿವರ್ತನಾ ಮಹೋತ್ಸವ’ ಸಮಾರಂಭದಲ್ಲಿ ಪಿಂಛಿ ಸ್ವೀಕರಿಸಿ ಮಂಗಲ ಪ್ರವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ, ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಇಂದಿನ ಹಾಗೂ ಹಿಂದಿನ ಚಾತುರ್ಮಾಸ ಅಜಿಲ ಸೀಮೆಯಲ್ಲೇ ನಡೆದಿರುವುದು ಸಂತಸ ನೀಡಿದೆ ಎಂದರು.

ಜಾಹೀರಾತು

ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಮೂಡಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿ, ಕಂಬದಹಳ್ಳಿಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಎನ್.ಆರ್. ಪುರದ ಸಿಂಹನಗದ್ದೆ ಬಸ್ತಿ ಮಠದ ಸ್ವಸ್ತಿಶ್ರೀ ಮದಭಿನವ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಮಂಡ್ಯದ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಚಾತುರ್ಮಾಸ ಸಮಿತಿಯ ಗೌರವಾಧ್ಯಕ್ಷ ಉದಯ ಕುಮಾರ್ ಕಟ್ಟೆಮನೆ, ಅಧ್ಯಕ್ಷ ಜಿರಂಜನ ಜೈನ್ ಇರ್ವತ್ತೂರು ಗುತ್ತು, ಖಜಾಂಚಿ ವೃಷಭ ಕುಮಾರ ಇಂದ್ರ, ಅರುಣ ಕುಮಾರ ಇಂದ್ರ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಕಾರ್ಯದರ್ಶಿ ಸುಜೀತ್ ಕುಮಾರ್ ಜೈನ್ ವರದಿ ಮಂಡಿಸಿದರು. ಅಜ್ಜಿಬೆಟ್ಟು ಬಸದಿಯ ಆಡಳಿತ ಮಂಡಳಿಯ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಸ್ವಾಗತಿಸಿದರು. ಧರಣೇಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

ಹಿರಿಯ ಜೈನ ಸಾಹಿತಿ ಇರ್ವತ್ತೂರು ಬೀಡು ವಿಜಯ ಜಿ. ಜೈನ್ ಅವರು ದ್ವಾದಶಾನುಪೇಕ್ಷೆ ಮತ್ತು ಸ್ವಾಮಿ ಸಮಂತಭದ್ರ ಆಚಾರ್ಯ ರಚಿಸಿರುವ ಬೃಹತ್ ಸ್ವಯಂಭೂ ಸ್ತೋತ್ರದ ತುಳು ಅನುವಾದಿತ ಕೃತಿಯನ್ನು ಮುನಿಶ್ರೀ 108 ದಿವ್ಯಸಾಗರ ಮಹಾರಾಜರು ಈ ಸಂದರ್ಭ ಬಿಡುಗಡೆ ಮಾಡಿದರು. ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಡಾ. ಜಯಮಾಲಾ ಎನ್. ಉಜಿರೆ ಪ್ರಕಾಶನದ ಸ್ವಾಮಿ ಜಿನಸೇನಾಚಾರ್ಯ ವಿರಚಿತ ಶ್ರೀ ಸಾರ್ಥ ಜಿನಸಹಸ್ರನಾಮಾದಿ ಸ್ತ್ರೋತ್ರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗದ `ಪಿಂಛಿ ಪರಿವರ್ತನಾ ಮಹೋತ್ಸವ’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*