ವಾಮದಪದವು

ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗದ `ಪಿಂಛಿ ಪರಿವರ್ತನಾ ಮಹೋತ್ಸವ’

ಬಂಟ್ವಾಳ: ಸಂಸಾರ, ಶರೀರ ಮತ್ತು ಭೋಗದಿಂದ ಭವ್ಯಾತ್ಮ ವಿರಕ್ತವಾಗುತ್ತದೆ. ಇದರಿಂದ ಆತ್ಮವನ್ನು ಅರಿತುಕೊಂಡು ಕಲ್ಯಾಣ ಮಾರ್ಗದಲ್ಲಿ ಸಾಗುತ್ತದೆ. ರತ್ನತ್ರಯ ಧಾರಣೆಯಿಂದ ಆತ್ಮ ಕಲ್ಯಾಣವಾಗುತ್ತದೆ. ಈ ಭುವಿಯಲ್ಲಿ 24 ತೀರ್ಥಂಕರರ ಉಪದೇಶಗಳಿಂದ ಮೋಕ್ಷ ಮಾರ್ಗ ದೊರಕುತ್ತದೆ ಎಂದು ಮುನಿಶ್ರೀ 108 ದಿವ್ಯಸಾಗರ ಮಹಾರಾಜ ಹೇಳಿದರು.

ಜಾಹೀರಾತು

ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗದ `ಪಿಂಛಿ ಪರಿವರ್ತನಾ ಮಹೋತ್ಸವ’ ಸಮಾರಂಭದಲ್ಲಿ ಪಿಂಛಿ ಸ್ವೀಕರಿಸಿ ಮಂಗಲ ಪ್ರವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ, ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಇಂದಿನ ಹಾಗೂ ಹಿಂದಿನ ಚಾತುರ್ಮಾಸ ಅಜಿಲ ಸೀಮೆಯಲ್ಲೇ ನಡೆದಿರುವುದು ಸಂತಸ ನೀಡಿದೆ ಎಂದರು.

ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಮೂಡಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿ, ಕಂಬದಹಳ್ಳಿಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಎನ್.ಆರ್. ಪುರದ ಸಿಂಹನಗದ್ದೆ ಬಸ್ತಿ ಮಠದ ಸ್ವಸ್ತಿಶ್ರೀ ಮದಭಿನವ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಮಂಡ್ಯದ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಚಾತುರ್ಮಾಸ ಸಮಿತಿಯ ಗೌರವಾಧ್ಯಕ್ಷ ಉದಯ ಕುಮಾರ್ ಕಟ್ಟೆಮನೆ, ಅಧ್ಯಕ್ಷ ಜಿರಂಜನ ಜೈನ್ ಇರ್ವತ್ತೂರು ಗುತ್ತು, ಖಜಾಂಚಿ ವೃಷಭ ಕುಮಾರ ಇಂದ್ರ, ಅರುಣ ಕುಮಾರ ಇಂದ್ರ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಕಾರ್ಯದರ್ಶಿ ಸುಜೀತ್ ಕುಮಾರ್ ಜೈನ್ ವರದಿ ಮಂಡಿಸಿದರು. ಅಜ್ಜಿಬೆಟ್ಟು ಬಸದಿಯ ಆಡಳಿತ ಮಂಡಳಿಯ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಸ್ವಾಗತಿಸಿದರು. ಧರಣೇಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಹಿರಿಯ ಜೈನ ಸಾಹಿತಿ ಇರ್ವತ್ತೂರು ಬೀಡು ವಿಜಯ ಜಿ. ಜೈನ್ ಅವರು ದ್ವಾದಶಾನುಪೇಕ್ಷೆ ಮತ್ತು ಸ್ವಾಮಿ ಸಮಂತಭದ್ರ ಆಚಾರ್ಯ ರಚಿಸಿರುವ ಬೃಹತ್ ಸ್ವಯಂಭೂ ಸ್ತೋತ್ರದ ತುಳು ಅನುವಾದಿತ ಕೃತಿಯನ್ನು ಮುನಿಶ್ರೀ 108 ದಿವ್ಯಸಾಗರ ಮಹಾರಾಜರು ಈ ಸಂದರ್ಭ ಬಿಡುಗಡೆ ಮಾಡಿದರು. ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಡಾ. ಜಯಮಾಲಾ ಎನ್. ಉಜಿರೆ ಪ್ರಕಾಶನದ ಸ್ವಾಮಿ ಜಿನಸೇನಾಚಾರ್ಯ ವಿರಚಿತ ಶ್ರೀ ಸಾರ್ಥ ಜಿನಸಹಸ್ರನಾಮಾದಿ ಸ್ತ್ರೋತ್ರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts