ಕಲ್ಲಡ್ಕ

ಪೆರಾಜೆ ಶಾಲೆಯಲ್ಲಿ ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ ಕಾರ್ಯಕ್ರಮ

ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಹೇಳಿಕೊಳ್ಳಲು ಗ್ರಾಮವಾಸ್ತವ್ಯ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಹೇಳಿದರು.

ಜಾಹೀರಾತು

ಮಾಣಿ ಸಮೀಪ ಪೆರಾಜೆ ಗ್ರಾಮದ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ಸವಲತ್ತುಗಳನ್ನು ಹೇಗೆ ಪಡೆಯಬೇಕು ಎಂಬ ಅರಿವು ಬಹಳಷ್ಟು ಜನರಿಗೆ ಇರುವುದಿಲ್ಲ. ಕೆಲವೊಮ್ಮೆ ದಾಖಲೆಗಳ ಕೊರತೆಯಿಂದಾಗಿ ಕಚೇರಿಗಳಿಗೆ ಬಂದು ವಾಪಸ್ ಹೋಗುವ ಪರಿಸ್ಥಿತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಏರ್ಪಡಿಸುವ ಮೂಲಕ ಇಲಾಖೆ ಜನರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಪೂರಕ ಮಾಹಿತಿಗಳನ್ನು ನೀಡುವ ಕಾರ್ಯವನ್ನು ಮಾಡುತ್ತದೆ ಎಂದರು.

ಜಾಹೀರಾತು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಉಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪಂಚಾಯತ್ ಅಭಿವೃಧ್ದಿ ಅಧಿಕಾರಿ ಸುನಿಲ್ ಕುಮಾರ್, ಉಪತಹಸೀಲ್ದಾರ್ ಗಳಾದ ನವೀನ್ ಕುಮಾರ್, ವಿಜಯ ವಿಕ್ರಮ, ಗ್ರೆಟ್ಟಾ, ನರೇಂದ್ರನಾಥ್ ಮಿತ್ತೂರು ಉಪಸ್ಥಿತರಿದ್ದರು. ಗ್ರಾಮಕರಣಿಕರಾದ ವೈಶಾಲಿ ಸ್ವಾಗತಿಸಿದರು. ಕೃತಿಕಾ ಧನ್ಯವಾದ ಸಮರ್ಪಿಸಿದರು.ಮಾಣಿ,ಪೆರಾಜೆ ಗ್ರಾಮದ ಗ್ರಾಮಕರಣಿಕರಾದ ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮವಾಸ್ತವ್ಯದಲ್ಲಿ ಒಟ್ಟು 44 ಅರ್ಜಿ ಸ್ವೀಕಾರವಾಗಿದ್ದು, 16 ಅರ್ಜಿಗಳು ವಿಲೇವಾರಿ ಆಗಿರುತ್ತದೆ. ಮಧ್ಯಾಹ್ನದ ನಂತರ ಮಾನ್ಯ ತಹಶೀಲ್ದಾರ್ ರವರು ಪೆರಾಜೆ ಗ್ರಾಮದ ಮಡಲ ಪರಿಶಿಷ್ಟ ಜಾತಿ ಕಾಲೋನಿ, ಸಾದಿಕುಕ್ಕು ಮತ್ತು ಮಡಲ ಅಂಗನವಾಡಿ ಕೇಂದ್ರ ಹಾಗೂ 94ಸಿ ಸ್ಥಳ ಭೇಟಿ ನೀಡಿ ಪರಿಶೀಲಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ