ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಉದ್ಘಾಟನೆ

ನಂತೂರು, ನ.19: ವಿದ್ಯಾಸಂಸ್ಥೆಯಲ್ಲಿ ಪಠ್ಯ, ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ಬೇಕು. ಅದರಿಂದ ಪರಿಪೂರ್ಣ ಶಿಕ್ಷಣ ತಲುಪಲು ಸಾಧ್ಯ ಎಂದು‌ ಬಿಎಡ್ ಕಾಲೇಜು ಪ್ರಾಂಶುಪಾಲ ಸಿಪ್ರಿಯನ್ ಮೊಂತೆರೋ ಹೇಳಿದರು.

ಜಾಹೀರಾತು

ಅವರು ಶನಿವಾರ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದ.ಕ.ಜಿಲ್ಲೆ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಉದ್ಘಾಟಿಸಿ, ಮಾತನಾಡಿದರು.

ಬಿಎಡ್ ಕಾಲೇಜು ವೃತ್ತಿ ಶಿಕ್ಷಣ ಉಪನ್ಯಾಸಕ ಕಂಟೆಪ್ಪ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿಯೊಂದು ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಸತತ ಭಾಗವಹಿಸುವುದು ಅಗತ್ಯ. ಆಗ ಅನುಭವ ಮತ್ತು ಜಯ ಲಭಿಸುತ್ತದೆ ಎಂದು ಹೇಳಿದರು.
ಬಿ.ಆರ್.ಸಿ. ಪ್ರಶಾಂತ್ ರಾವ್, ಕರ್ನಾಟಕ ಸಮಗ್ರ ಶಿಕ್ಷಣ ಉಪಯೋಜನೆ ಸಮನ್ವಯಾಧಿಕಾರಿ ಸುಮಂಗಳಾ ನಾಯಕ್, ಡಯಟ್ ಹಿರಿಯ ಸಮನ್ವಯಾಧಿಕಾರಿ ಶಿವಪ್ರಕಾಶ್, ಪೊಳಲಿ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಭಟ್, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಕೋಶಾಧಿಕಾರಿ ಉದಯಶಂಕರ್ ನೀರ್ಪಾಜೆ, ಪ್ರಾಂಶುಪಾಲರಾದ ಗಂಗಾರತ್ನಾ, ದ.ಕ.ಜಿಲ್ಲೆ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷೆ ಸುಫಲಾ ಉಪಸ್ಥಿತರಿದ್ದರು.

ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಸಂಘಟನ ಕಾರ್ಯದರ್ಶಿ ದೇವದಾಸ್ ಪ್ರಸ್ತಾಪಿಸಿದರು. ದ.ಕ.ಜಿಲ್ಲೆ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಿನ್ನಪ್ಪ ಕಲ್ಲಡ್ಕ ಸ್ವಾಗತಿಸಿದರು. ಕಾರ್ಯದರ್ಶಿ ಗೀತಾ ವಂದಿಸಿದರು. ವಿನ್ನಿ ಫಿಲೋಮಿನಾ ಮತ್ತು ವೀರಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ವಸ್ತುಪ್ರದರ್ಶನ :
ಜಿಲ್ಲೆಯ ವಿವಿಧ ಶಾಲೆಗಳ ವೃತ್ತಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಚಿಸಿದ ಕಲಾಕೃತಿಗಳು, ಸಣ್ಣ ಮಕ್ಕಳ ಸರಕಿನ ಅಂಗಿ, ಬ್ಯಾಗ್, ಸೀರೆಯಲ್ಲಿ ರಚಿಸಿದ ಮ್ಯಾಟುಗಳು, ತೋರಣಗಳು, ಕಸದಿಂದ ರಸ, ಹೂಗಳು, ಗೂಡು ದೀಪಗಳು, ಫೀನಾಲ್, ಕ್ಲೀನಿಂಗ್ ಪೌಡರ್, ತೋಟಗಾರಿಕೆ ವಿಭಾಗದ ಹೂಗಿಡ, ತಾರಸಿ ಕೃಷಿ, ಗೊಬ್ಬರ ಮಾದರಿಗಳು ಆಕರ್ಷಕವಾಗಿದ್ದವು. ಸುತ್ತಮುತ್ತಲಿನ ಶಾಲೆಯ ವಿದ್ಯಾರ್ಥಿಗಳು, ಸಾರ್ವಜನಿಕರು ವಸ್ತುಪ್ರದರ್ಶನ ವೀಕ್ಷಿಸಿ ಆನಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*