ಬಂಟ್ವಾಳ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಮನೆ ಮಂಜೂರಾದ ಫಲಾನುಭವಿಗಳಿಗೆ ಆದೇಶಪತ್ರ ವಿತರಣೆ

ಬಂಟ್ವಾಳ: ಅಂಬೇಡ್ಕರ್ ನಗರ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಯಡಿಲ್ಲಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾಮಗಾರಿ ಅದೇಶ  ಪತ್ರವನ್ನು ಬಂಟ್ವಾಳ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ವಿತರಿಸಿದರು.

ಜಾಹೀರಾತು

ಪುರಸಭಾ ವ್ಯಾಪ್ತಿಯಲ್ಲಿ ಈವರೆಗೆ ಅರ್ಜಿ ನೀಡಿದ  ಒಟ್ಟು 65  ಮಂದಿಗೆ ಫಲಾನುಭವಿಗಳಿಗೆ ಹಕ್ಕು ನೀಡಲಾಗಿದ್ದು, ಇನ್ನು ನಿವೇಶನ ರಹಿತರು ಶೀಘ್ರವಾಗಿ ಪುರಸಭೆಗೆ  ಅರ್ಜಿ ನೀಡಿದರೆ  ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು ಎಂದು ಅವರು ಹೇಳಿದರು. ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ, ಪುರಸಭಾ ಸದಸ್ಯರಾದ ವಿದ್ಯಾವತಿ ಪ್ರಮೋದ್ ಕುಮಾರ್, ಮೀನಾಕ್ಷಿ ಗೌಡ, ಶಶಿಕಲಾ,  ದೇವಕಿ, ಹರಿಪ್ರಸಾದ್, ನಾಮನಿರ್ದೇಶಿತ ಸದಸ್ಯ ಚಂದ್ರಶೇಖರ ದರ್ಬೆ, ಪುರಸಭಾ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಮತ್ತಿತರರು ಉಪಸ್ಥಿತರಿದ್ದರು. ಉಮಾವತಿ ಫಲಾನುಭವಿಗಳ ಪಟ್ಟಿ ವಾಚಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.