ಸಾಹಿತ್ಯ ಸಮ್ಮೇಳನಕ್ಕೆಂದು ಸಂಗ್ರಹಿಸಿದ ಉಳಿಕೆ ಮೊತ್ತ ಶಾಲಾ ಶಿಕ್ಷಕರ ವೇತನಕ್ಕೆ ದೇಣಿಗೆ ನೀಡಿದ ಸ್ವಾಗತ ಸಮಿತಿ

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವೊಂದು ನಡೆದ ಹದಿನೈದು ದಿನಗಳೊಳಗೆ ಲೆಕ್ಕಪತ್ರ ಮಂಡನೆ ಮಾಡಿ, ಉಳಿಕೆ ಹಣವನ್ನು ಶಾಲಾ ಶಿಕ್ಷಕರಿಗೆಂದು ಠೇವಣಿ ಇರಿಸುವ ಮೂಲಕ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗಮನ ಸೆಳೆದಿದೆ.

ಜಾಹೀರಾತು

ಅಮ್ಮುಂಜೆ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದ  ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಲೆಕ್ಕಪತ್ರ ಮಂಡನೆ, ಸಮ್ಮೇಳನಕ್ಕೆ ದುಡಿದ ಸ್ವಾಗತ ಸಮಿತಿ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಧನ್ಯವಾದ ಸಮರ್ಪಣೆ ಸಭೆ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‌ನಡೆಯಿತು.

ಈ ಸಂದರ್ಭ ಸಮ್ಮೇಳನಕ್ಕೆಂದು ದಾನಿಗಳು, ಸಂಘ, ಸಂಸ್ಥೆಗಳಿಂದ ಸ್ವಾಗತ ಸಮಿತಿಯ ವತಿಯಿಂದ ಸಂಗ್ರಹಿಸಲಾದ ಮೊತ್ತದಲ್ಲಿ ಉಳಿಕೆಯಾದ 1,58,184 ರೂಗಳನ್ನು ಸಮ್ಮೇಳನ ನಡೆದ ಅಮ್ಮುಂಜೆ ಅನುದಾನಿತ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ನೀಡುವ ವೇತನಕ್ಕೆ ಠೇವಣಿಯಾಗಿಟ್ಟು ಬಳಸಲು ನಿರ್ಧರಿಸಲಾಯಿತು.

ಸ್ವಾಗತ ಸಮಿತಿ ಅಧ್ಯಕ್ಷ ಉಮೇಶ್ ಸಾಲಿಯಾನ್ ಅವರ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಪ್ರೊ ಬಾಲಕೃಷ್ಣ ಗಟ್ಟಿ, ಕಸಾಪ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್, ಗೌರವ ಕೋಶಾಧಿಕಾರಿ ಡಿ. ಬಿ. ಅಬ್ದುಲ್ ರಹಿಮಾನ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರಾಜೇಶ್ವರಿ, ನಿವೃತ್ತ ಪ್ರಿನ್ಸಿಪಾಲ್ ಗುಂಡಿಲಗುತ್ತು ಶಂಕರ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕಿ ಲೂವಿಝಾ ಕುಟಿನ್ಹೋ, ಕಸಾಪ ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಮಹಮ್ಮದ್, ಪದಾಧಿಕಾರಿಗಳಾದ ರವೀಂದ್ರ ಕುಕ್ಕಾಜೆ, ರಜನಿ ಚಿಕ್ಕಯಮಠ ಉಪಸ್ಥಿತರಿದ್ದರು

ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಅಬೂಬಕರ್ ಅಮ್ಮುಂಜೆ ಮತ್ತು ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಹರೀಶ್ ರಾವ್ ವಂದಿಸಿದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಾಹಿತ್ಯ ಸಮ್ಮೇಳನಕ್ಕೆಂದು ಸಂಗ್ರಹಿಸಿದ ಉಳಿಕೆ ಮೊತ್ತ ಶಾಲಾ ಶಿಕ್ಷಕರ ವೇತನಕ್ಕೆ ದೇಣಿಗೆ ನೀಡಿದ ಸ್ವಾಗತ ಸಮಿತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*