ಬಂಟ್ವಾಳ

ಬ್ರಹ್ಮಕೂಟ್ಲು ತಲಪಾಡಿ ಬಳಿ ಆಟೊ ಪಲ್ಟಿ

ಬಂಟ್ವಾಳ: ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಸಮೀಪ ತಲಪಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಆಟೊವೊಂದು ಹಿಂದಿನಿಂದ ವಾಹನ ಡಿಕ್ಕಿ ಹೊಡೆದು, ಪಲ್ಟಿಯಾದ ಘಟನೆ ನಡೆದಿದೆ. ಆಟೊದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. 

ಜಾಹೀರಾತು

ಈ ಕುರಿತು ಆಟೊ ಚಾಲಕ ಮೂಡನಡುಗೋಡು ನಿವಾಸಿ ಪುರುಷೋತ್ತಮ (45) ಮತ್ತು ಪ್ರಯಾಣಿಕರಾದ ಹೃತಿಕ್ ಗಾಯಗೊಂಡಿದ್ದಾರೆ.

ಪ್ರಯಾಣಿಕರಾದ ಹೃತಿಕ ಎಂಬವರನ್ನು ಕರೆದುಕೊಂಡು ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಬೆಳಿಗ್ಗೆ 8 ಗಂಟೆಗೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ತಲಪಾಡಿ ಬಸ್ಸ್ ನಿಲ್ದಾಣದ ಬಳಿ ತಲುಪಿದಾಗ ಹಿಂದಿನಿಂದ ಅಂದರೆ ಬಿ ಸಿ ರೋಡು ಕಡೆಯಿಂದ ಕಾರೊಂದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ಆಟೋರಿಕ್ಷಾ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ್ದು ಪರಿಣಾಮ ಆಟೋರಿಕ್ಷಾ ಚಾಲಕ ಪುರುಷೋತ್ತಮ್ ಅವರಿಗೆ ಹಣೆಗೆ, ಎಡ ಭಾಗ ಕೆನ್ನೆಗೆ, ಗಲ್ಲಕ್ಕೆ, ಮೆಲ್ತುಟಿಗೆ, ಬಲಭಾಗ ಭುಜಕ್ಕೆ ಗುದ್ದಿದ ಗಾಯ ಮತ್ತು ತರಚಿರ ಗಾಯ ಹಾಗೂ ಪ್ರಯಾಣಿಕರಾದ ಹೃತಿಕ ಎಂಬವರಿಗೆ ಹಿಂಬದಿ ತಲೆಗೆ ಗುದ್ದಿದ ರಕ್ತ ಗಾಯ, ಬಲ ಮತ್ತು ಎಡ ಕೈಗಳಲ್ಲಿ ತರಚಿದ ಗಾಯವಾಗಿದ್ದು ಬಳಿಕ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಬ್ಬರು ಒಳ ರೋಗಿಯಾಗಿ ದಾಖಲಿಸಲಾಯಿತು. ಅಪಘಾತಪಡಿಸಿದ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿರುವುದಾಗಿ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಅ.ಕ್ರ 152/2022 ಕಲಂ: 279, 337, ಐಪಿಸಿ 134 (ಎ ಮತ್ತು ಬಿ),187 ಐ ಎಮ್ ವಿ ಯಂತೆ ಪ್ರಕರಣ ದಾಖಲಾಗಿದೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.