ಬಂಟ್ವಾಳ: ಕಟೀಲು ಐದನೇ ಮೇಳದ ಚೌಕಿ ಸಹಾಯಕರಾಗಿದ್ದ ಅಚ್ಯುತ ನಾಯಕ್ (45) ಸೋಮವಾರ ಬಂಟ್ವಾಳ ತಾಲೂಕಿನ ಮೊಡಂಕಾಪು ಸಮೀಪ ನಡೆದ ಬಯಲಾಟದ ಬಳಿಕ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರು ಮಣಿನಾಲ್ಕೂರು ಬಳಿಯ ಕೊಡಂಗೆ ನಿವಾಸಿ. ಆಟ ಮುಗಿದ ಬಳಿಕ ಪರಿಕರಗಳನ್ನು ವಾಹನಕ್ಕೆ ಲೋಡ್ ಮಾಡುವ ಸಂದರ್ಭದಲ್ಲಿ ಅಸೌಖ್ಯಕ್ಕೀಡಾದ ಅವರನ್ನು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವು ಸಂಭವಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಟೀಲು 5ನೇ ಮೇಳದ ಚೌಕಿ ಸಹಾಯಕ ಅಚ್ಯುತ ನಾಯಕ್ ನಿಧನ"