ಬಂಟ್ವಾಳ

ಯೂತ್ ಫ್ರೆಂಡ್ಸ್ ವಾಮದಪದವು ಆಶ್ರಯದಲ್ಲಿ ಡಿ.17ರಂದು ಎ ಗ್ರೇಡ್ ಕಬಡ್ಡಿ ಪಂದ್ಯಾಟ

ಜಾಹೀರಾತು

ಬಂಟ್ವಾಳ: ವಾಮದಪದವು ಪದವಿ ಕಾಲೇಜಿನ ಮೈದಾನದಲ್ಲಿ ಡಿ.17ರಂದು ರಾಷ್ಟ್ರದ ವಿವಿಧ ಭಾಗಗಳ ಆಯ್ದ 12 ಆಹ್ವಾನಿತ ತಂಡಗಳ ಪ್ರೊ.ಕಬಡ್ಡಿ ಆಟಗಾರರ ಭಾಗವಹಿಸುವಿಕೆಯೊಂದಿಗೆ ಎ ಗ್ರೇಡ್ ಕಬಡ್ಡಿ ಪಂದ್ಯಾಟ ನಡೆಯಲಿದೆ.

ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ ನಡೆಯುವ ಪಂದ್ಯಾಟದಲ್ಲಿ ಹತ್ತು ಸಾಧಕರನ್ನು ಗೌರವಿಸಲಾಗುವುದು ಎಂದು ಸಂಘಟಕ ನಿತಿನ್ ಶೆಟ್ಟಿ ಮೂರ್ಜೆ ಹೇಳಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರೋಪದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರು ಭಾಗವಹಿಸಲಿದ್ದಾರೆ. ಹರಿಪ್ರಸಾದ್ ಶೆಟ್ಟಿ, ರವಿ ಕಕ್ಯಪದವು, ಸುನಿಲ್ ಸಿಕ್ವೇರ, ಸುದೀಪ್ ಶೆಟ್ಟಿ ಕಂಚಾರು, ಆಸೀದ್ ಪದಂಗಡಿ ಮತ್ತು ಸಹನಾ ಎಂ. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಹರಿಪ್ರಸಾದ್ ಶೆಟ್ಟಿ, ಪ್ರಮುಖರಾದ ಸುಧಾಕರ ಶೆಟ್ಟಿ ಮಠ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ