ಪುಂಜಾಲಕಟ್ಟೆ

ಏಕಾಏಕಿ ಕುಸಿದು ಬಿದ್ದು ಕಾರ್ಮಿಕ ಸಾವು

ಪುಂಜಾಲಕಟ್ಟೆ: ಕೆಲಸ ಮಾಡುತ್ತಿದ್ದ ತಮಿಳುನಾಡಿನ ಮೂಲದ ವ್ಯಕ್ತಿಯೊಬ್ಬ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದಲ್ಲಿ ನಡೆದಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಸುಮಾರು 10 ದಿನಗಳ ಹಿಂದೆ ತಮಿಳುನಾಡು ರಾಜ್ಯದ ಚೊಂಕಂಪಟ್ಟಿ ತಿರುನೆವಲ್ ನಿವಾಸಿ ಮರಿಯಪ್ಪನ್ (45) ಕೆಲಸಕ್ಕೆ ಬಂದಿದ್ದು , ಅವರು ಎಂದಿನಂತೆ ಕೆಲಸ ಮಾಡುತ್ತಿದ್ದು ಸಮಯ ಸುಮಾರು 9 ಗಂಟೆಗೆ  ರೂಮ್ ನಿಂದ ತಂದಿದ್ದ  ಬುತ್ತಿಯನ್ನು ಬಿಸಿಲಿನಿಂದ ನೆರಳಿಗೆ ಇಡಲೆದು ಹೋದಾಗ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಇತರರು ಎತ್ತಿ ಆರೈಕೆ ಮಾಡಿ ನೋಡಿದಾಗ ಮರಿಯಪ್ಪನ್ ಮಾತನಾಡದೇ ಇದ್ದುದರಿಂದ ಕೂಡಲೇ ಖಾಸಗಿ ಅಂಬುಲೆನ್ಸ್ ವೊಂದಕ್ಕೆ ಕರೆ ಮಾಡಿ ಅಂಬುಲೆನ್ಸ್ ಮೂಲಕ ಮರಿಯಪ್ಪನ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು  ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು.ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.