ಬಂಟ್ವಾಳ

18ರಂದು ಬಂಟ್ವಾಳದ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನದಲ್ಲಿ ಗುರುವಂದನಾ ಕಾರ್ಯಕ್ರಮ, ಆಗಮ ಪ್ರವೀಣ ಬಿರುದು ಪ್ರದಾನ

ಬಂಟ್ವಾಳ: ಬಂಟ್ವಾಳ ಮಣಿಹಳ್ಳ ಪಣೆಕಳದ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನದಲ್ಲಿ ಡಿ.18ರಂದು ಭಾನುವಾರ ಶ್ರೀ ಆದಿಶಕ್ತಿ ಭದ್ರಕಾಳಿ ಸೇವಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಸರ್ವೈಶ್ವರ್ಯ ಪೂಜೆ, ಗುರುವಂದನಾ ಕಾರ್ಯಕ್ರಮ ಮತ್ತು ಆಗಮ ಪ್ರವೀಣ ಬಿರುದು ಪ್ರದಾನ ಮಾಡಲಾಗುತ್ತದೆ ಎಂದು ಶ್ರೀ ಮಹಮ್ಮಾಯಿ ದುರ್ಗಾಂಬಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಹಾಬಲ ಬಂಗೇರ ಹೇಳಿದರು.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ವೇಳೆ ಶ್ರೀ ದುರ್ಗಾಂಬಾ ದೇವಸ್ಥಾನದ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಲಾಗುವುದು. ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ, ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಉಪಸ್ಥಿತಿಯಲ್ಲಿ ನಡೆಯಲಿದ್ದು, ಧಾರ್ಮಿಕ ಉಪನ್ಯಾಸವನ್ನು ಕುಂಟಾರು ರವೀಶ ತಂತ್ರಿ ನೆರವೇರಿಸುವರು. ಇದೇ ವೇಳೆ ಮಣಿಹಳ್ಳ ಪಣೆಕಳದ ವಸಂತ ಭಟ್ ಅವರಿಗೆ ಆಗಮ ಪ್ರವೀಣ ಬಿರುದು ನೀಡಲಾಗುವುದು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇಸಪ್ಪ ಕೋಟ್ಯಾನ್ ಅವರನ್ನು ಸನ್ಮಾನಿಸಲಾಗುವುದು. ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಹಿತ ಗಣ್ಯರು ಭಾಗವಹಿಸುವರು ಎಂದರು. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಶ್ರೀ ಮಹಮ್ಮಾಯಿ ದುರ್ಗಾಂಬಾ ಟ್ರಸ್ಟ್ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಕಾರ್ಯದರ್ಶಿ ಉಮೇಶ್ ಕುಲಾಲ್, ಜೀರ್ಣೋಧ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್, ಆದಿಶಕ್ತಿ ಕ್ಷೇತ್ರದ ಅಧ್ಯಕ್ಷ ಲೋಕೇಶ್ ಭಟ್, ಪ್ರಮುಖರಾದ ನಾಗೇಶ್, ಸಂಜೀವ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ