ಬಿಲ್ಲವ ಸಮುದಾಯಕ್ಕೆ ಅನ್ಯಾಯ ಆರೋಪಿಸಿ ಪ್ರಣವಾನಂದ ಸ್ವಾಮೀಜಿಯಿಂದ ಬೃಹತ್ ಪಾದಯಾತ್ರೆ

ಬಂಟ್ವಾಳ: ಬಿಲ್ಲವ ಸಮುದಾಯವನ್ನು ಸಂಘಟಿಸುವ ಹಾಗೂ ಪ್ರಮುಖ 3 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.6ರಂದು ಮಂಗಳೂರಿನ ಕುದ್ರೋಳಿ ದೇವಸ್ಥಾನದಿಂದ ಬೃಹತ್ ಪಾದಾಯಾತ್ರೆ ನಡೆಯಲಿದೆ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ  ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಜಾಹೀರಾತು

ಬಂಟ್ವಾಳ ಪ್ರವಾಸಿ ಬಂಗಲೆಯಲ್ಲಿ  ಬಿಲ್ಲವ ಸಮುದಾಯದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. 

ಮುಂದಿನ ಚುನವಣೆಯ ವೇಳೆ ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಎರಡೂ ರಾಜಕೀಯ ಪಕ್ಷಗಳು ತಲಾ 4 ಸ್ಥಾನಗಳನ್ನು ಬಿಲ್ಲವ ಸಮಾಜದ ಅಭ್ಯರ್ಥಿಗಳಿಗೆ ನೀಡಬೇಕು, ಬಿಲ್ಲವರ ಮತಗಳ ಲೆಕ್ಕಚಾರದಲ್ಲಿಯೇ ಎರಡೂ ಪಕ್ಷಗಳು ರಾಜಕೀಯ ಪ್ರಾತಿನಿಧ್ಯವನ್ನು ನೀಡಬೇಕು ಎಂದು ಆಗ್ರಹಿಸಿದರು.

ಜಾಹೀರಾತು

ಕರಾವಳಿಯಲ್ಲಿ ಬಿಲ್ಲವರ ಸಂಖ್ಯೆ ಅಪಾರವಾಗಿದ್ದರೂ ಕರವಾಳಿ ಅಭಿವೃದ್ದಿ ಪ್ರಾಧಿಕಾರದಲ್ಲಿ ಬಿಲ್ಲವರಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಬಿಲ್ಲವರನ್ನು ಆಯ್ಕೆ ಮಾಡಿಲ್ಲ,  ಯಾವುದೇ ರಾಜ್ಯ ಸಮಿತಿಗಳಲ್ಲಿ ಬಿಲ್ಲವರನ್ನು ಸೇರಿಸಿಕೊಳ್ಳುತ್ತಿಲ್ಲ ಇದು ನಮಗೆ ಮಾಡುತ್ತಿರುವ ಅನ್ಯಾಯ ಎಂದರು.

ಸಮುದಾಯದ ಪ್ರಮುಖರಾದ ಕೆ. ಸಂಜೀವ ಪೂಜಾರಿ, ಶಂಕರ್ ಸುವರ್ಣ, ನವೀನ್ ಕೋಟ್ಯಾನ್, ವಾಸು ಪೂಜಾರಿ, ಜಗದೀಶ್ ಕೊಯಿಲ, ಜಯಂತಿ ಪೂಜಾರಿ, ಲೋಕೇಶ್ ಸುವರ್ಣ ಅಲೆತ್ತೂರು, ಶ್ರೀಧರ ಅಮೀನ್, ಪ್ರೇಮನಾಥ ಕೆ., ಪ್ರಶಾಂತ್ ಕೋಟ್ಯಾನ್,  ಸುಂದರ ಪೂಜಾರಿ, ಸತೀಶ್ ಬಾಯಿಲ, ನಾಗೇಶ್ ಪೂಜಾರಿ, ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಲ್ಲವ ಸಮುದಾಯಕ್ಕೆ ಅನ್ಯಾಯ ಆರೋಪಿಸಿ ಪ್ರಣವಾನಂದ ಸ್ವಾಮೀಜಿಯಿಂದ ಬೃಹತ್ ಪಾದಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*