ಬಂಟ್ವಾಳ

ವಕೀಲರ ರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಸರಕಾರವನ್ನು ಒತ್ತಾಯಿಸಿ ಮನವಿ

ಬಂಟ್ವಾಳ: ವಕೀಲರ ರಕ್ಷಣಾ ಕಾಯ್ದೆ ಮಸೂದೆಯನ್ನು ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆ ಮಾಡಿ ಅಂಗೀಕರಿಸುವಂತೆ ಒತ್ತಾಯಿಸಿ ಶನಿವಾರ ದ.ಕ ಜಿಲ್ಲಾ ಕಾನೂನು ವೇದಿಕೆ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಇಂದು ವಕೀಲರಿಗೆ ರಕ್ಷಣೆ ಇಲ್ಲದಂತಾಗಿದ್ದು ಹಲವಾರು ಸಂದರ್ಭಗಳಲ್ಲಿ ವಕೀಲರ ಮೇಲೆ ದಾಳಿಗಳಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ ಈ ನಿಟ್ಟಿನಲ್ಲಿ ಕೂಡಲೇ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಬೇಕೆಂದು ವಕೀಲರ ಆಗ್ರಹವಾಗಿದೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ಜಿಲ್ಲಾ ಕಾನೂನು ವೇದಿಕೆಯ ತಾಲೂಕು ಅಧ್ಯಕ್ಷರಾದ ಸುರೇಶ್ ಪೂಜಾರಿ, ಹಿರಿಯ ವಕೀಲರಾದ ಚಂದ್ರಶೇಖರ.ಕೆ.ವಿ, ಹಾತಿಮ್ ಅಹಮ್ಮದ್, ಚಂದ್ರಶೇಖರ ರಾವ್ ಪುಂಚಮೆ, ರಾಜಾರಾಮ್ ನಾಯಕ್, ಸುರೇಶ್ ಕುಮಾರ್ ನಾವೂರು, ಉಮಾಕರ್ ಬಂಗೇರ, ಮಹಮ್ಮದ್ ಕಬೀರ್ ಕೆಮ್ಮಾರ, ಉಮೇಶ್ ಕುಮಾರ್.ವೈ , ಅಬ್ದುಲ್ ರಹಿಮಾನ್, ರಿಚಾರ್ಡ್ ಡಿ ಕೋಸ್ತ, ಸತೀಶ್.ಬಿ, ಗಂಗಾಧರ್ ನಾಯಕ್,  ಯುವ ವಕೀಲರಾದ ವೀರೇಂದ್ರ ಸಿದ್ದಕಟ್ಟೆ, ಮೋಹನ್ ಕುಮಾರ್ ಕಡೇಶ್ವಾಲ್ಯ, ಚಂದ್ರಶೇಖರ್ ಬೈರಿಕಟ್ಟೆ, ಅಬ್ದುಲ್ ಜಲೀಲ್.ಎನ್, ತುಳಸೀದಾಸ್ ವಿಟ್ಲ, ಮಹಮ್ಮದ್ ಅಶ್ರಫ್, ಸಾಯಿನಾಥ್ ಗೌಡ, ಲಕ್ಮೀನಾರಾಯಣ ಸಿದ್ದಕಟ್ಟೆ, ಮಹಮ್ಮದ್ ಮುಂಝಿರ್ ಮುಂತಾದವರು ಇದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ