ಗ್ರಾಮ ಪಂಚಾಯಿತಿ ನೌಕರರು ಡಿ.19ರಿಂದ ಅನಿರ್ದಿಷ್ಟಾವಧಿ ಸಾಮೂಹಿಕ ರಜೆ ಪಡೆದುಕೊಂಡಿದ್ದು, ಅವರ ಬೇಡಿಕೆಗಳನ್ನು ಪುರಸ್ಕರಿಸಬೇಕು ಎಂದು ರಾಜ್ಯ ಸರಕಾರಕ್ಕೆ ಕನ್ಯಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪಿ.ಅಬ್ದುಲ್ ರಹಿಮಾನ್ ಒತ್ತಾಯಿಸಿದ್ದಾರೆ.
![](https://i0.wp.com/bantwalnews.com/wp-content/uploads/2022/12/IMG-20221217-WA0045.jpg?resize=119%2C162&ssl=1)
ಕೆ.ಪಿ.ಅಬ್ದುಲ್ ರಹಿಮಾನ್ K.P. ABDUL RAHIMAN
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮ ಪಂಚಾಯತ್ ನೌಕರರ ಡಿಸೆಂಬರ್ 19 ರಿಂದ ಅನಿರ್ಧಿಷ್ಟಾವಧಿ ಸಾಮೂಹಿಕ ರಜೆ ಪಡೆದುಕೊಂಡಿರುತ್ತಾರೆ. ಈ ಅವಧಿಯಲ್ಲಿ ಗ್ರಾಮ ಪಂಚಾಯತ್ ನ ಎಲ್ಲಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಸಿಗುವ ಸೇವೆಯಲ್ಲಿ ವ್ಯತ್ಯಯವಾಗಲಿದ್ದು ಇದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗಲಿದೆ. ಆದುದರಿಂದ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳಿಗೆ ಸರಕಾರ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಗ್ರಾಪಂ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ: ಕನ್ಯಾನ ಗ್ರಾಪಂ ಅಧ್ಯಕ್ಷ ಒತ್ತಾಯ"