ಗ್ರಾಮ ಪಂಚಾಯಿತಿ ನೌಕರರು ಡಿ.19ರಿಂದ ಅನಿರ್ದಿಷ್ಟಾವಧಿ ಸಾಮೂಹಿಕ ರಜೆ ಪಡೆದುಕೊಂಡಿದ್ದು, ಅವರ ಬೇಡಿಕೆಗಳನ್ನು ಪುರಸ್ಕರಿಸಬೇಕು ಎಂದು ರಾಜ್ಯ ಸರಕಾರಕ್ಕೆ ಕನ್ಯಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪಿ.ಅಬ್ದುಲ್ ರಹಿಮಾನ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮ ಪಂಚಾಯತ್ ನೌಕರರ ಡಿಸೆಂಬರ್ 19 ರಿಂದ ಅನಿರ್ಧಿಷ್ಟಾವಧಿ ಸಾಮೂಹಿಕ ರಜೆ ಪಡೆದುಕೊಂಡಿರುತ್ತಾರೆ. ಈ ಅವಧಿಯಲ್ಲಿ ಗ್ರಾಮ ಪಂಚಾಯತ್ ನ ಎಲ್ಲಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಸಿಗುವ ಸೇವೆಯಲ್ಲಿ ವ್ಯತ್ಯಯವಾಗಲಿದ್ದು ಇದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗಲಿದೆ. ಆದುದರಿಂದ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳಿಗೆ ಸರಕಾರ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗ್ರಾಪಂ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ: ಕನ್ಯಾನ ಗ್ರಾಪಂ ಅಧ್ಯಕ್ಷ ಒತ್ತಾಯ"