ಬಂಟ್ವಾಳ: ಖಾಸಗಿ ಬಸ್ಸುಗಳೆರಡು ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆ ತೆರಳುವ ಮಾರ್ಗದಲ್ಲಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಮುಖಾಮುಖಿ ಡಿಕ್ಕಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ಘಟನೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.
ಜಾಹೀರಾತು
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಅಡ್ಡಹೊಳೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಜಾಗದಲ್ಲಿ ಎರಡೂ ಬಸ್ಸುಗಳು ಗಮ್ಯಸ್ಥಾನ ತಲುಪುವ ತರಾತುರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಡಿಕ್ಕಿಯಾಗಿದೆ. ಇದೇ ಸಂದರ್ಭ ಬಸ್ಸಿಗೆ ಕಾರು ಡಿಕ್ಕಿಯಾದ ಘಟನೆಯೂ ನಡೆಯಿತು. ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೂ ಇದರಿಂದ ತೊಂದರೆ ಉಂಟಾಗಿದ್ದು, ಬಳಿಕ ಗಜಲಕ್ಷ್ಮೀ ಕ್ರೇನ್ ಮೂಲಕ ಬಸ್ಸುಗಳನ್ನು ಕೊಂಡೊಯ್ಯಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇತ್ರಾವತಿ ಸೇತುವೆ ಬಳಿ ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ"