ಭಾರತಿ ಶಾಲೆ ಹಳೆ ವಿದ್ಯಾರ್ಥಿ ಸಂಘದಿಂದ ಜೀವ ರಕ್ಷಣಾ ಕೌಶಲ್ಯ ತರಬೇತಿ ಶಿಬಿರ ಸಂಪನ್ನ

ಅಪಘಾತ, ತುರ್ತು ಪರಿಸ್ಥಿತಿ ಸಂದರ್ಭ ಕೈಗೊಳ್ಳಬೇಕಾದ ತುರ್ತು ಪರಿಹಾರೋಪಾಯಗಳ ಕುರಿತು ಮಾಹಿತಿ ನೀಡಿದ ಹಳೆ ವಿದ್ಯಾರ್ಥಿ ಜಗದೀಶ ಅಡಪ

ಮುಡಿಪು: ಮುಡಿಪು ಶ್ರೀ ಭಾರತಿ ಶಾಲೆ ವಿದ್ಯಾರ್ಥಿಗಳ ಸಂಘ ಮುಡಿಪು ಆಶ್ರಯದಲ್ಲಿ ಡಿ.18ರಂದು ಅಪರಾಹ್ನ ಹಳೆ ವಿದ್ಯಾರ್ಥಿಗಳ ಕುಟುಂಬದವರು ಹಾಗೂ ಸಾರ್ವಜನಿಕರಿಗಾಗಿ “ಸುರಕ್ಷತೆಯ ಪಾಲನೆ, ಜೀವನದ ಲಾಲನೆ”ಕೌಟುಂಬಿಕ ಸುರಕ್ಷತೆಯ ಕುರಿತ ಜೀವ ರಕ್ಷಣಾ ಕೌಶಲ್ಯ ಕಾರ್ಯಾಗಾರ ನಡೆಯಿತು. ಶಾಲೆಯ ಹಿರಿಯ ಹಳೆ ವಿದ್ಯಾರ್ಥಿ,ಜೀವ ರಕ್ಷಣಾ ಕೌಶಲ್ಯ ತಜ್ಞ ಚೆನ್ನೈಯ ಜಗದೀಶ ಅಡಪ ಸುಮಾರು 4 ಗಂಟೆಗಳ ಕಾಲ ಕಾರ್ಯಾಗಾರವನ್ನು ಉಚಿತವಾಗಿ ನಡೆಸಿಕೊಟ್ಟರು.

ಜಾಹೀರಾತು

ಬೆಂಕಿ ಅವಘಡ, ಅಡುಗೆ ಅನಿಲ ಸೋರಿಕೆ, ಅಡುಗೆ ಕೋಣೆಯಲ್ಲಿನ ಅಗ್ನಿ ಆಕಸ್ಮಿಕಗಳು, ಅಪಘಾತ ಸಂಭವಿಸಿದಾಗ ಗಾಯಾಳುಗಳ ರಕ್ಷಣೆ, ತಲೆಗೆ ಏಟಾದಾಗ ಬ್ಯಾಂಡೇಜ್ ಬಿಗಿಯುವ ವಿಧಾನ, ಕೈ ಮುರಿಯುವಿಕೆ ಆದಾಗ ಕೈಯ್ಯನ್ನು ತಕ್ಷಣ ರಕ್ಷಿಸುವ ಪ್ರಥಮ ಚಿಕಿತ್ಸೆ, ಶ್ವಾಸೋಚ್ಛಾಸ ವ್ಯತ್ಯಾಸ, ಹೃದಾಯಾಘಾತಗಳ ಸಂದರ್ಭ ನಾವೇ ಮಾಡಬಹುದಾದ ಸುಲಭ ಪ್ರಥಮ ಚಿಕಿತ್ಸೆಗಳು ಇತ್ಯಾದಿಗಳ ಕುರಿತು ಉದಾಹರಣೆ ಹಾಗೂ ಪ್ರಾತ್ಯಕ್ಷಿಕೆ ಸಹಿತ ಅಡಪ ಅವರು ತರಬೇತಿ ನೀಡಿದರು.

ಶಾಲೆಯ ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

ಜಾಹೀರಾತು

ಶಾಲೆಯ ಹಿರಿಯ ನಿವೃತ್ತ ಶಿಕ್ಷಕಿ ಶಶಿಕಲಾ ಟೀಚರ್, ಹಿರಿಯರಾದ ಲಕ್ಷ್ಮೀ ಜೆ.ಶೆಟ್ಟಿ, ಕೊಣಾಜೆ ಶಂಕರ್ ಭಟ್ ಅವರು ದೀಪ ಪ್ರಜ್ವಲನೆ ಮೂಲಕ ಶಿಬಿರ ಉದ್ಘಾಟಿಸಿದರು. ಹಳೆ ವಿದ್ಯಾರ್ಥಿಗಳ ಸಂಘದ ಗೌರವ ಸಲಹೆಗಾರ ಕೆ.ಶಂಕರನಾರಾಯಣ ಭಟ್, ಶ್ರೀ ಭಾರತಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಮುರಳಿಮೋಹನ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಲ್ ಶೆಟ್ಟಿ, ಸಂಸ್ಥೆಯ ಸಂಚಾಲಕ ಕೆ.ಎಸ್.ಭಟ್, ಮುಖ್ಯೋಪಾಧ್ಯಾಯಿನಿ ಶಕುಂತಳಾ ಶೆಟ್ಟಿ, ಹಿರಿಯ ಶಿಕ್ಷಕ ರಾಮ ಕಲ್ಲೂರಾಯ ಮತ್ತಿತರರು ಹಾಜರಿದ್ದರು.

ಕಾರ್ಯಾಗಾರದ ವೆಚ್ಚ ಭರಿಸಿ, ಉಚಿತವಾಗಿ ಪ್ರಾತ್ಯಕ್ಷಿಕೆ ನೀಡಿದ ಶಾಲೆಯ ಹಿರಿಯ ಹಳೆ ವಿದ್ಯಾರ್ಥಿಗಳಾದ ಜಗದೀಶ ಅಡಪ ಹಾಗೂ ಅವರ ಸಹೋದರ ಜಯಶೀಲ ಅಡಪ ಅವರನ್ನು ಸಂಸ್ಥೆ ವತಿಯಿಂದ ಶಾಲು ಹೊದೆಸಿ, ಗಿಡ ನೀಡಿ ಗೌರವಿಸಲಾಯಿತು. ಈ ಸಂದರ್ಭ ತಾವು ಕಲಿತ ಶಾಲೆಗೆ ಮಾನವನ ಶ್ವಾಸೋಚ್ಛಾಸ ಸುಲಲಿತಗೊಳಿಸುವ ಪ್ರಾತ್ಯಕ್ಷಿಕೆ ನೀಡುವ ಮಾನವ ದೇಹದ ಪ್ರೃತಿಕೃತಿ ಪರಿಕರವನ್ನು ಕೊಡುಗೆಯಾಗಿ ಜಗದೀಶ ಅಡಪ ನೀಡಿದರು.

ಜಾಹೀರಾತು

ಭಾರತಿ ಶಾಲೆಯ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಕೆ.ಆರ್.ಸ್ವಾಗತಿಸಿ, ವಂದಿಸಿದರು. ಭಾರತಿ ಶಾಲೆಯ ಮುಖ್ಯೋಪಾಧ್ಯಾಯ ಕೆ.ರಾಮಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ವಿದ್ಯಾರ್ಥಿಗಳಾದ ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಮೊಹಮ್ಮದ್ ಅಸ್ಗರ್, ಡಾ.ಅರುಣ್ ಪ್ರಸಾದ್, ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ನರಸಿಂಹ ಭಟ್, ಶಿಕ್ಷಕ ರಾಮಕೃಷ್ಣ ಭಟ್ ಲಾಡ, ಮನು ಕೊಡಕ್ಕಲ್ಲು, ಸಂಶುದ್ದೀನ್ ಸಹಿತ ಹಲವರು ಸಹಕರಿಸಿದರು.

ಮುಡಿಪು ಶ್ರೀ ಭಾರತಿ ಶಾಲೆ 1948ನೇ ಇಸವಿಯಲ್ಲಿ ಸ್ಥಾಪನೆಯಾಗಿದ್ದು, 2023ರಲ್ಲಿ ಅಮೃತಮಹೋತ್ಸವ ಆಚರಿಸುತ್ತಿದೆ. ಅಮೃತ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸರಣಿ ಕಾರ್ಯಕ್ರಮಗಳ ಪ್ರಯುಕ್ತ ಈ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾರತಿ ಶಾಲೆ ಹಳೆ ವಿದ್ಯಾರ್ಥಿ ಸಂಘದಿಂದ ಜೀವ ರಕ್ಷಣಾ ಕೌಶಲ್ಯ ತರಬೇತಿ ಶಿಬಿರ ಸಂಪನ್ನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*