ಸಂಗೀತ

ಡಿ.25ರಂದು ಮಂಚಿ ಕುಕ್ಕಾಜೆಯಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ

ಬಂಟ್ವಾಳ: ಸುರತ್ಕಲ್ ನ ಚಿರಂತನ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಮಂಚಿ ಕುಕ್ಕಾಜೆಯಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಗಾಯನ ಗೋಷ್ಠಿಯನ್ನು ಡಿ.25ರ ಭಾನುವಾರ ಆಯೋಜಿಸಲಾಗಿದೆ. ಇಲ್ಲಿನ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಸಂಜೆ 5.30ರಿಂದ 6.30ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಎಂ.ಆರ್.ಪಿ.ಎಲ್. ಮಂಗಳೂರು ಸಹಕಾರ ನೀಡಲಿದೆ.

ಜಾಹೀರಾತು

ವಿದುಷಿ ಶಾರದಾ ಭಟ್ ಕಟ್ಟಿಗೆ, ಮೈಸೂರು ಇವರಿಂದ ಗಾಯನ ಇರಲಿದ್ದು, ತಬಲಾದಲ್ಲಿ ಭಾರವಿ ದೇರಾಜೆ ಸುರತ್ಕಲ್, ಸಂವಾದಿನಿಯಾಗಿ ಶಶಿಕಿರಣ್ ಮಣಿಪಾಲ ಸಹಕರಿಸಲಿದ್ದಾರೆ.

ಮೈಸೂರಿನಲ್ಲಿ ನೆಲೆಸಿರುವ ಶಾರದಾ ಭಟ್, ಆಕಾಶವಾಣಿಯ ಗ್ರೇಡೆಡ್ ಕಲಾವಿದರಾಗಿದ್ದು, ಹಿಂದುಸ್ತಾನಿ ಸಂಗೀತದಲ್ಲಿ ಸ್ನಾತಕೋತ್ತರ ಪದವೀಧರರು ಹಾಗೂ ವಿದ್ವತ್ ಪದವಿ ಪಡೆದಿದ್ದಾರೆ. ಅವರು ತನ್ನ ತಂದೆ ಕಟ್ಟಿಗೆ ಸುಬ್ರಹ್ಮಣ್ಯ ಭಟ್ ಅವರಿಂದ ಪ್ರಾಥಮಿಕ ಸಂಗೀತ ಶಿಕ್ಷಣ ಪಡೆದು, ಧಾರವಾಡದ ಪಂಡಿತ್ ಚಂದ್ರಶೇಖರ ಪುರಾಣಿಕ್ ಮಠ್, ಪಂಡಿತ್ ಷಡಕ್ಷರಿ ಗವಾಯಿ, ಪಂಡಿತ್ ಪರಮೇಶ್ವರ ಹೆಗಡೆ, ಪಂಡಿತ್ ಇಂಧೂದರ ನಿರೋಡಿ, ಪಂಡಿತ್ ಎಸ್.ಸಿ.ಆರ್. ಭಟ್ ಮತ್ತು ಲಘು ಶಾಸ್ತ್ರೀಯ ಸಂಗೀತವನ್ನು ಪಂಡಿತ್ ವಸಂತ್ ಕನಕಾಪುರ್ ಅವರಿಂದ ಅಭ್ಯಸಿಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ