ಬಂಟ್ವಾಳ

ಎಂಡಿಎಂಎ ಸಾಗಾಟ: ಬಿ.ಸಿ.ರೋಡ್ ಬಳಿ ಇಬ್ಬರ ಬಂಧಿಸಿದ ಬಂಟ್ವಾಳ ಪೊಲೀಸರು

ಜಾಹೀರಾತು

 ಬಂಟ್ವಾಳ: ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ.

ಬಿಕಸ್ಬಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (23) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ ಗ್ರಾಮದ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ  ವಾಹನಗಳನ್ನು ತಪಾಸಣೆ ಮಾಡಿಕೊಂಡಿರುವಾಗ ನಾರಾಯಣಗುರು ವೃತ್ತದ  ಕಡೆಯಿಂದ ಬಂದ ಆರೋಪಿಗಳಿಬ್ಬರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ನಿಲ್ಲಿಸಲು ಸೂಚಿಸಿ ದಾಖಲಾತಿ ಕೇಳಿದಾಗ ಚಾಲಕನ ವರ್ತನೆಯಲ್ಲಿ ಅನುಮಾನ ಕಂಡು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಎಂಡಿಎಂಎ ನಿದ್ರಾಜನಕ ಸೊತ್ತನ್ನು ಸೇವಿಸಿರುವುದು ಗಮನಕ್ಕೆ ಬಂದಿದೆ.

ಜಾಹೀರಾತು

ಇರ್ಷಾದ್ ಬಳಿಯಿಂದ 4 ಗ್ರಾಮ್‌  ತೂಕ ಹಾಗೂ ದೀಕ್ಷಿತ್ ಬಳಿಯಿಂದ 5 ಗ್ರಾಮ್‌  ತೂಕದ ನಿದ್ರಾಜನಕ ಸೊತ್ತಾದ ಎಂಡಿಎಂಎ ಮಾತ್ರೆ ಇದ್ದು, ಸುಮಾರು  20 ಸಾವಿರ ಮೌಲ್ಯದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ