ಭಾನುವಾರ ಬೆಳಗಿನ ಜಾವ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿ ವಾಹನದಟ್ಟಣೆ ಉಂಟಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಸಾಗುವ ಸಂದರ್ಭ ಬೆಂಗಳೂರು ಮತ್ತು ಮೈಸೂರು ಕಡೆಗಳಿಗೆ ಹೋಗುವ ರಸ್ತೆ ಕವಲೊಡೆಯುವ ಜಾಗವಾದ ಮಾಣಿಯಲ್ಲಿ ಬಿ.ಸಿ.ರೋಡ್ ಅಡ್ಡಹೊಳೆ ರಸ್ತೆ ಅಭಿವೃದ್ಧಿ ಕಾರ್ಯಗಳೂ ಸಾಗುತ್ತಿದ್ದು, ಸರ್ವೀಸ್ ರಸ್ತೆಯನ್ನು ಮಾಡದ ಕಾರಣ ಆಗಾಗ ವಾಹನ ಸವಾರರಲ್ಲಿ ಗೊಂದಲ ಉಂಟಾಗುತ್ತಿದೆ.
ಇಂದು ಬೆಳಗ್ಗೆ ಎರಡು ಲಾರಿಗಳು ಮಾಣಿ ಜಂಕ್ಷನ್ ನಲ್ಲಿ ಮಂಗಳೂರು ಕಡೆಗೆ ಹೋಗುವ ಸಂದರ್ಭ ಓವರ್ ಟೇಕ್ ಭರಾಟೆಯಲ್ಲಿ ಒಂದಕ್ಕೊಂದು ಒರೆಸಿಕೊಂಡವು. ಬೆಳಗ್ಗೆ ಸುಮಾರು 6.40ರ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು, ಸುಮಾರು 9 ಗಂಟೆವರೆಗೂ ಎರಡೂ ಬದಿಗಳಲ್ಲಿ ವಾಹನಗಳು ಸಂಚರಿಸಲು ಪರದಾಡಿದವು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…