ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಮಂಚಿ ಕುಕ್ಕಾಜೆಯಲ್ಲಿ ಸಂಸ್ಕೃತಿ ಉತ್ಸವ

ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಮಂಚಿ ಕುಕ್ಕಾಜೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಮೂರು ದಿನಗಳ ಕಾಲ ಸಂಸ್ಕೃತಿ ಉತ್ಸವ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಉದ್ಘಾಟನೆ: ಚೆಂಡೆ ಬಾರಿಸುವ ಮೂಲಕ ಮಹದೇವ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತಯ್ಯ ವಿ.ರಾವ್, ಪತ್ತುಮುಡಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದರಾದ ಪುಷ್ಪರಾಜ ಕುಕ್ಕಾಜೆ ಮತ್ತು ಪ್ರಸಾಧನ ಕಲಾವಿದ ಶಿವ ಶಂಕರ ರಾವ್ ಅವರನ್ನು ಸನ್ಮಾನಿಸಲಾಯಿತು. ಸಭಾಧ್ಯಕ್ಷತೆಯನ್ನು ಮಂಚಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಪುಷ್ಪಾ ಕಾಮತ್ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಸ್ವಾಗತಿಸಿ, ಉಮಾನಾಥ ರೈ ವಂದಿಸಿದರು. ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.   ಸಂಸ್ಕೃತಿ ಉತ್ಸವದ ಅಂಗವಾಗಿ, ಮೋಹನ್ ರಾವ್ ಮತ್ತು ಬಳಗದವರಿಂದ ’ಸೀತಾ ಪರಿತ್ಯಾಗ’ ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮ ಜರಗಿತು.

ಜಾಹೀರಾತು

ಎರಡನೇ ದಿನ ನಡೆದ ಕಾರ್ಯಕ್ರಮದಲ್ಲಿ ’ತುಳುನಾಡಿನ ಭೌತಿಕ ಸಂಸ್ಕೃತಿ’ ಎನ್ನುವ ವಿಷಯವಾಗಿ, ದಿ.ಡಾ.ಕಜೆಮಹಾಬಲ ಭಟ್ಟರ ಸ್ಮರಣಾರ್ಥ, ವಿಶೇಷ ಉಪನ್ಯಾಸವನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ನೀಡಿದರು. ನಮ್ಮ ಹಿರಿಯರು ಅನಕ್ಷರಸ್ಥರು, ಅವರ ಮೌಖಿಕ ಜ್ಞಾನದಿಂದ, ಅವರವರು ಆಯಾಯ ಕಾಲದಲ್ಲಿ ಏನೆಲ್ಲಾ ಭೌತಿಕ ವಸ್ತುಗಳನ್ನು ಬಳಕೆ ಮಾಡಿಕೊಂಡು ಬಂದಿದ್ದರೋ, ಅವುಗಳನ್ನೆಲ್ಲ ಗಮನಿಸಿದರೆ, ಅವುಗಳು ಅದ್ಭುತವಾದ ಚರಿತ್ರೆಯನ್ನೇ ಹೇಳುತ್ತವೆ. ನಮ್ಮ ಆಚರಣೆಗಳೆಲ್ಲ ನೇರವಾಗಿ ಕೃಷಿ ಸಂಬಂಧಿಯಾಗಿರುವುದು ಸಹ ಆಯಾ ಕಾಲದಲ್ಲಿ ಬಳಕೆಯಾಠದ ಭೌತಿಕ ವಸ್ತುಗಳು ಅಂದಿನ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದರು.ಮುಖ್ಯ ಅತಿಥಿಗಳಾಗಿ ಬಿ.ಸಿ.ರೋಡಿನ ಹಿರಿಯ ವಕೀಲ ಅಜಿತ್ ಕುಮಾರ ರಾವ್ ಭಾಗವಹಿಸಿದ್ದರು. ಮಕ್ಕಳ ನಾಟಕ ವಿನ್ಯಾಸಕಾರರಾದ ಮೂರ್ತಿ ದೇರಾಜೆ ಅಧ್ಯಕ್ಷತೆ ವಹಿಸಿ,  ಡಾ. ಮಹಾಬಲ ಭಟ್ಟರ ನೆನಪನ್ನು ಮಾಡಿಕೊಂಡರು.

ಇದೇ ಸಂದರ್ಭದಲ್ಲಿ, ಡಾ.ಚಕ್ರಪಾಣಿ, ಮತ್ತು ಬಳಗದವರಿಂದ ಕೊಳಲುವಾದನ ಕಛೇರಿ ನಡೆಯಿತು. ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ಟರು ಸ್ವಾಗತಿಸಿ, ರಮಾನಂದ ನೂಜಿಪ್ಪಾಡಿ ವಂದಿಸಿದರು. ಉಮಾನಾಥ ರೈ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಸಮಾರೋಪ: ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ನೂಜಿಬೈಲು ನಾರಾಯಣ ಭಟ್, ಬಿ.ವಿ.ಕಾರಂತರು  ರಂಗಭೂಮಿಯ ಮೂಲಕ ನೀಡಿದ ಸಂಸ್ಕೃತಿ ಅದು ಸಾರ್ವಕಾಲಿಕವಾದುದು ಎಂದರು. ಮುಖ್ಯ ಅತಿಥಿಗಳಾಗಿ ಲಯನ್ ಮಾಜಿ ರಾಜ್ಯಪಾಲ ದೇವದಾಸ ಭಂಡಾರಿ ಮತ್ತು ಪತ್ರಕರ್ತ ಹರೀಶ್ ಮಾಂಬಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು. ಇದೇ ಸಂದರ್ಭದಲ್ಲಿ, ಹರಿಕಥಾ ಕೀರ್ತನಕಾರರಾದ, ಮಂಜುಳಾ ಗುರುರಾಜ ರಾವ್ ರವರನ್ನು ಸನ್ಮಾನಿಸಲಾಯಿತು. ಗಣೇಶ ಐತಾಳರು ಮಾನ ಪತ್ರ ವಾಚಿಸಿದರು. ಇದೇ ಸಂದರ್ಭದಲ್ಲಿ ’ನಂದಗೋಕುಲ ಟ್ರಸ್ಟ್’ , ಮಂಗಳೂರು ಇವರು ಪ್ರಸ್ತುತಿ ಪಡಿಸಿದ, ಶ್ವೇತಾ ಅರೆಹೊಳೆ ಇವರಿಂದ ಏಕ ವ್ಯಕ್ತಿ ನಾಟಕ ಪ್ರದರ್ಶನ ’ಗೆಲ್ಲಿಸ ಬೇಕು ಅವಳ’ ಪ್ರದರ್ಶನ ಗೊಂಡಿತು. ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ಟರು ಸ್ವಾಗತಿಸಿ, ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಾರದಾ ಎಸ್.ರಾವ್ ಮತ್ತು ಶೈಲಜ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಮಂಚಿ ಕುಕ್ಕಾಜೆಯಲ್ಲಿ ಸಂಸ್ಕೃತಿ ಉತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*