ಪದ್ಯಾಣ ಸರಕಾರಿ ಶಾಲಾ ವಾರ್ಷಿಕೋತ್ಸವ

ಜಾಹೀರಾತು

ಕರ್ನಾಟಕ ಕೇರಳ ಗಡಿಭಾಗವಾದ ಪದ್ಯಾಣದಲ್ಲಿರುವ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷಗಳ ನಂತರ ಹಳೆ ವಿದ್ಯಾರ್ಥಿಗಳು, ಊರವರ ಸಹಕಾರದಿಂದ ವಾರ್ಷಿಕೋತ್ಸವ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನ್ವರ್ ಕರೋಪಾಡಿ, ಸರಕಾರಿ ಶಾಲೆಗಳ ಸಬಲೀಕರಣ ಅಗತ್ಯ ಎಂದರು.

ಕನ್ಯಾನ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಕೆ. ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಾಹೀರಾತು

ದೀಪ ಬೆಳಗಿಸಿ ನಿವೃತ್ತ ಮುಖ್ಯೋಪಾಧ್ಯಾಯ ಪದ್ಯಾಣ ತಿಮ್ಮಣ್ಣ ಭಟ್ ಚಾಲನೆ ನೀಡಿದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಹಾಗೂ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ, ಪೆರಿಯದ ಸಹಾಯಕ ಪ್ರಾಧ್ಯಾಪಕ ಡಾ. ಪ್ರವೀಣ ಪದ್ಯಾಣ ಶಾಲೆಯ ಅಭಿವೃದ್ಧಿಗೆ ನಾವೆಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ಗಡಿಜಾಗೆ, ಕರೋಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶಶಾಂಕ ಭಟ್ ಹಾಗೂ ಪ್ರಸನ್ನ ಪದ್ಯಾಣ ಉಪಸ್ಥಿತರಿದ್ದರು. ಶಾಲೆಯ ಹಳೆ ವಿದ್ಯಾರ್ಥಿ, ಕಾರ್ಗಿಲ್ ಯೋಧ ಗೋವಿಂದ ಪ್ರಸಾದ್, ಆಶಾ ಕಾರ್ಯಕರ್ತೆ ಆಶಾಲತಾ, ಸ್ಥಾಪಕ ಅಧ್ಯಾಪಕ ಪದ್ಯಾಣ ತಿಮ್ಮಣ್ಣ ಭಟ್, ಶಾಲೆಯಲ್ಲಿ ಹಿಂದೆ ಕರ್ತವ್ಯ ನಿರ್ವಹಿಸಿದ ಶಿಕ್ಷಕ ದಂಪತಿಗಳಾದ ಶಿವಪ್ಪ ಗೌಡ ಪದ್ಯಾಣ ಹಾಗೂ ಶೋಭಾವತಿ, ಶಾಲಾ ಮುಖ್ಯೋಪಾಧ್ಯಾಯರಾದ ಸಾವಿತ್ರಿ.ಕೆ, ಶಿಕ್ಷಕರಾದ ವೀಣಾ ಕುಮಾರಿ, ಅಂಗನವಾಡಿ ಶಿಕ್ಷಕರಾದ ಯಶೋಧಾ, ವಾರಿಜ, ಅಕ್ಷರ ದಾಸೋಹ ಸಹಾಯಕಿಯಾದ ಸೀತಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಸಾವಿತ್ರಿ ಕೆ. ಸ್ವಾಗತಿಸಿ, ಸಹಶಿಕ್ಷಕಿ ವೀಣಾ ಕುಮಾರಿ ವಂದಿಸಿದರು. ಪ್ರತೀಕ್ಷಾ ಪದ್ಯಾಣ ಮತ್ತು ಖದೀಜತ್ ತಸ್ಲೀಮಾ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪದ್ಯಾಣ ಸರಕಾರಿ ಶಾಲಾ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*